<p><strong>ಕಲಬುರಗಿ:</strong> ‘ಸ್ಮಾರ್ಟ್ ಸಾರಿಗೆ, ವಿದ್ಯುತ್ ಚಾಲಿತ ವಾಹನಗಳು ಭಾರತದ ಸಾರಿಗೆ ವ್ಯವಸ್ಥೆಯ ಭವಿಷ್ಯ’ ಎಂದು ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.</p>.<p>ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಒಂದು ವಾರದ ಅಟಲ್ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ,‘ಮುಂದಿನ ದಿನಗಳಲ್ಲಿ ಇವು ಭಾರತ ದೇಶವನ್ನು ನಡೆಸುವ ಚಾಲಕ ಶಕ್ತಿಯಾಗಲಿವೆ’ ಎಂದರು.</p>.<p>ವಿಶ್ವವಿದ್ಯಾಲಯದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಅಮರೇಂದ್ರ ಮತ್ಸ ಮಾತನಾಡಿ,‘ದೇಶದಾದ್ಯಂತ ವಿವಿಧ ಸಂಸ್ಥೆಗಳ ಅಧ್ಯಾಪಕರು, ಸಂಶೋಧಕರು ಮತ್ತು ವೃತ್ತಿಪರರು ಸೇರಿದಂತೆ ಒಟ್ಟು 60 ಜನ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ’ ಎಂದು ಹೇಳಿದರು.</p>.<p>ಡಿಬಿಎಸ್ ಬ್ಯಾಂಕ್ನ ಮೆಷಿನ್ ಲರ್ನಿಂಗ್ ಎಂಜಿನಿಯರಿಂಗ್ನ ಹಿರಿಯ ಉಪಾಧ್ಯಕ್ಷ ಟಿ.ಸೀತಾರಾಮ್ ಮಾತನಾಡಿದರು.</p>.<p>ಎಂಜಿನಿಯರಿಂಗ್ ನಿಕಾಯದ ಡೀನ್ ಪ್ರೊ.ಪರಮೇಶ, ಮೋದಿ ಪಾಂಡುರಂಗ ಪ್ರಸಾದ್, ಉದಯ ಪಾಟೀಲ, ಸುಧೀರ, ಸಂತೋಷ ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಅರುಣಕುಮಾರ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಸ್ಮಾರ್ಟ್ ಸಾರಿಗೆ, ವಿದ್ಯುತ್ ಚಾಲಿತ ವಾಹನಗಳು ಭಾರತದ ಸಾರಿಗೆ ವ್ಯವಸ್ಥೆಯ ಭವಿಷ್ಯ’ ಎಂದು ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.</p>.<p>ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಒಂದು ವಾರದ ಅಟಲ್ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ,‘ಮುಂದಿನ ದಿನಗಳಲ್ಲಿ ಇವು ಭಾರತ ದೇಶವನ್ನು ನಡೆಸುವ ಚಾಲಕ ಶಕ್ತಿಯಾಗಲಿವೆ’ ಎಂದರು.</p>.<p>ವಿಶ್ವವಿದ್ಯಾಲಯದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಅಮರೇಂದ್ರ ಮತ್ಸ ಮಾತನಾಡಿ,‘ದೇಶದಾದ್ಯಂತ ವಿವಿಧ ಸಂಸ್ಥೆಗಳ ಅಧ್ಯಾಪಕರು, ಸಂಶೋಧಕರು ಮತ್ತು ವೃತ್ತಿಪರರು ಸೇರಿದಂತೆ ಒಟ್ಟು 60 ಜನ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ’ ಎಂದು ಹೇಳಿದರು.</p>.<p>ಡಿಬಿಎಸ್ ಬ್ಯಾಂಕ್ನ ಮೆಷಿನ್ ಲರ್ನಿಂಗ್ ಎಂಜಿನಿಯರಿಂಗ್ನ ಹಿರಿಯ ಉಪಾಧ್ಯಕ್ಷ ಟಿ.ಸೀತಾರಾಮ್ ಮಾತನಾಡಿದರು.</p>.<p>ಎಂಜಿನಿಯರಿಂಗ್ ನಿಕಾಯದ ಡೀನ್ ಪ್ರೊ.ಪರಮೇಶ, ಮೋದಿ ಪಾಂಡುರಂಗ ಪ್ರಸಾದ್, ಉದಯ ಪಾಟೀಲ, ಸುಧೀರ, ಸಂತೋಷ ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಅರುಣಕುಮಾರ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>