<p><strong>ಕಲಬುರಗಿ: </strong>ಇಲ್ಲಿನ ಜನನಿಬಿಡ ರಾಮಮಂದಿರ ಬಳಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಹಾಕಿಕೊಂಡಿದ್ದ ಗೂಡಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಜೆಸಿಬಿಯಿಂದ ತೆರವುಗೊಳಿಸಿದರು.</p>.<p>ಈ ಸಂದರ್ಭದಲ್ಲಿ ವ್ಯಾಪಾರಿಗಳು, ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರ ವಣಿಕ್ಯಾಳ ರಸ್ತೆ ಒತ್ತುವರಿ ಮಾಡದಂತೆ ವ್ಯಾಪಾರಿಗಳಿಗೆ ತಿಳಿ ಹೇಳಿದ್ದರು.</p>.<p>ತೆರವುಗೊಳಿಸುವಂತೆ ಕೆಲ ದಿನಗಳ ಹಿಂದೆಯೇ ನೋಟಿಸ್ ಸಹ ನೀಡಲಾಗಿತ್ತು. ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಲು ವಿಫಲವಾಗಿದ್ದರಿಂದ ಪಾಲಿಕೆ ಅಧಿಕಾರಿಗಳು ಪೊಲೀಸರ ನೆರವಿನಿಂದ ತೆರವುಗೊಳಿಸಿದರು.</p>.<p>ವ್ಯಾಪಾರಿಗಳು ತೆರವಿಗೆ ಇನ್ನೊಂದಿಷ್ಟು ಸಮಯ ಕೊಡಬೇಕಿತ್ತು ಎಂದು ವಾಗ್ವಾದಕ್ಕಿಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಅಧಿಕಾರಿಗಳು ಒಳಚರಂಡಿ ಹಾಗೂ ರಸ್ತೆ ಮೇಲೆ ಗೂಡಂಗಡಿ ಹಾಕಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮಯ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ರಾಮ ಮಂದಿರವಲ್ಲದೇ ಇತರ ರಸ್ತೆಗಳಲ್ಲೂ ರಸ್ತೆ ಹಾಗೂ ಒಳಚರಂಡಿ ಅತಿಕ್ರಮಣ ಆಗಿರುವ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಎಂಜಿನಿಯರ್ಗಳಾದ ಸುಧೀರ ಮೇತ್ರೆ, ಪ್ರಭಾಕರ ತಿಳಿಸಿದರು.</p>.<p>ರಾಮಮಂದಿರ ವೃತ್ತವು ಹಲವು ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ಅಲ್ಲಿ ಗೂಡಂಗಡಿ ಹಾಕದಂತೆ ವ್ಯಾಪಾರಿಗಳಿಗೆ ತಿಳಿ ಹೇಳಲಾಗಿತ್ತು. ಆದರೂ ವ್ಯಾಪಾರ ಮುಂದುವರಿಸಿದ್ದರಿಂದ ತೆರವುಗೊಳಿಸಲಾಯಿತು ಎಂದು ಪಾಲಿಕೆಯ ಆಯುಕ್ತಡಾ. ಶಂಕರ ವಣಿಕ್ಯಾಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಇಲ್ಲಿನ ಜನನಿಬಿಡ ರಾಮಮಂದಿರ ಬಳಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಹಾಕಿಕೊಂಡಿದ್ದ ಗೂಡಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ಜೆಸಿಬಿಯಿಂದ ತೆರವುಗೊಳಿಸಿದರು.</p>.<p>ಈ ಸಂದರ್ಭದಲ್ಲಿ ವ್ಯಾಪಾರಿಗಳು, ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದ ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರ ವಣಿಕ್ಯಾಳ ರಸ್ತೆ ಒತ್ತುವರಿ ಮಾಡದಂತೆ ವ್ಯಾಪಾರಿಗಳಿಗೆ ತಿಳಿ ಹೇಳಿದ್ದರು.</p>.<p>ತೆರವುಗೊಳಿಸುವಂತೆ ಕೆಲ ದಿನಗಳ ಹಿಂದೆಯೇ ನೋಟಿಸ್ ಸಹ ನೀಡಲಾಗಿತ್ತು. ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಲು ವಿಫಲವಾಗಿದ್ದರಿಂದ ಪಾಲಿಕೆ ಅಧಿಕಾರಿಗಳು ಪೊಲೀಸರ ನೆರವಿನಿಂದ ತೆರವುಗೊಳಿಸಿದರು.</p>.<p>ವ್ಯಾಪಾರಿಗಳು ತೆರವಿಗೆ ಇನ್ನೊಂದಿಷ್ಟು ಸಮಯ ಕೊಡಬೇಕಿತ್ತು ಎಂದು ವಾಗ್ವಾದಕ್ಕಿಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಅಧಿಕಾರಿಗಳು ಒಳಚರಂಡಿ ಹಾಗೂ ರಸ್ತೆ ಮೇಲೆ ಗೂಡಂಗಡಿ ಹಾಕಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮಯ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ರಾಮ ಮಂದಿರವಲ್ಲದೇ ಇತರ ರಸ್ತೆಗಳಲ್ಲೂ ರಸ್ತೆ ಹಾಗೂ ಒಳಚರಂಡಿ ಅತಿಕ್ರಮಣ ಆಗಿರುವ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಎಂಜಿನಿಯರ್ಗಳಾದ ಸುಧೀರ ಮೇತ್ರೆ, ಪ್ರಭಾಕರ ತಿಳಿಸಿದರು.</p>.<p>ರಾಮಮಂದಿರ ವೃತ್ತವು ಹಲವು ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದರಿಂದ ಅಲ್ಲಿ ಗೂಡಂಗಡಿ ಹಾಕದಂತೆ ವ್ಯಾಪಾರಿಗಳಿಗೆ ತಿಳಿ ಹೇಳಲಾಗಿತ್ತು. ಆದರೂ ವ್ಯಾಪಾರ ಮುಂದುವರಿಸಿದ್ದರಿಂದ ತೆರವುಗೊಳಿಸಲಾಯಿತು ಎಂದು ಪಾಲಿಕೆಯ ಆಯುಕ್ತಡಾ. ಶಂಕರ ವಣಿಕ್ಯಾಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>