<p>ಕಲಬುರಗಿ: ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಇಂಡಿಯಾದ ಕಲಬುರಗಿ ಘಟಕದಿಂದ ನಗರದ ಎಸ್.ಬಿ.ಟೆಂಪಲ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಭಾನುವಾರ ಸಂಜೆ 6 ಗಂಟೆಗೆ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಹಾಗೂ ಎಂಜಿನಿಯರ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.</p>.<p>ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಪಾಲ್ಗೊಳ್ಳುವರು. ಇತಿಹಾಸಕಾರರೂ ಆಗಿರುವ ಎಂಜಿನಿಯರ್ ಧರ್ಮೇಂದ್ರ ಅರೇನಹಳ್ಳಿ ಗೌರವ ಅತಿಥಿಯಾಗಿ ಪಾಲ್ಗೊಳ್ಳುವರು.</p>.<p>ಬೆಂಗಳೂರಿನ ಎರಿಕ್ಸನ್ ಕಂಪನಿ ಎಂಜಿನಿಯರ್ ಸುನೀಲಕುಮಾರ್ ಕುಲಕರ್ಣಿ ದಿಕ್ಸೂಚಿ ಭಾಷಣ ಮಾಡುವರು. ಈ ಸಭೆಯ ಅಧ್ಯಕ್ಷತೆಯನ್ನು ದಿ ಇನ್ಸ್ಟಿಟ್ಯೂಟ್ ಆಫ್ ಆಫ್ ಎಂಜಿನಿಯರ್ಸ್ನ ಅಧ್ಯಕ್ಷ ಶ್ರೀಧರ ಪಾಂಡೆ ವಹಿಸುವರು.</p>.<p>ಇದೇ ಕಾರ್ಯಕ್ರಮದಲ್ಲಿ ಕಲಬುರಗಿಯ ಎಂಜಿನಿಯರ್ಗಳಾದ ಗಿರಿಧರ ಕುಲಕರ್ಣಿ, ನಾಗೇಂದ್ರಪ್ಪ ಬಿರಾದಾರ, ವಿಟಿಯು ಕಲಬುರಗಿ ಪ್ರಾದೇಶಿಕ ನಿರ್ದೇಶಕ ಪ್ರೊ.ಬಸವರಾಜ ಗಾದಗೆ, ಉದ್ಯಮಿ ಸಂಪತ್ ಗಿಲಡಾ, ಕೆಎಎಸ್ ಅಧಿಕಾರಿಯೂ ಆಗಿರುವ ಎಂಜಿನಿಯರ್ ಶ್ರೀಯಾಂಕಾ ಧನಶ್ರೀ, ಎಂಜಿನಿಯರ್ ಅನಿಲಕುಮಾರ್ ಕಾಡಾದಿ, ಪ್ರೊ.ನಾಗೇಂದ್ರ ಎಚ್. ಅವರನ್ನು ಸನ್ಮಾನಿಸಲಾಗುವುದು.</p>.<p>ಕಾರ್ಯಕ್ರಮದ ನಂತರ ಪ್ರಶಾಂತ್ ಕಾಂಬಳೆ, ಎಂಜಿನಿಯರ್ ಚಂದ್ರಶೇಖರ ಸುಲೆಪೇಟಕರ್ ಮತ್ತು ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರೊ.ಸೀತಾರಾಮ ಮುನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಇಂಡಿಯಾದ ಕಲಬುರಗಿ ಘಟಕದಿಂದ ನಗರದ ಎಸ್.ಬಿ.ಟೆಂಪಲ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಭಾನುವಾರ ಸಂಜೆ 6 ಗಂಟೆಗೆ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಹಾಗೂ ಎಂಜಿನಿಯರ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.</p>.<p>ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಪಾಲ್ಗೊಳ್ಳುವರು. ಇತಿಹಾಸಕಾರರೂ ಆಗಿರುವ ಎಂಜಿನಿಯರ್ ಧರ್ಮೇಂದ್ರ ಅರೇನಹಳ್ಳಿ ಗೌರವ ಅತಿಥಿಯಾಗಿ ಪಾಲ್ಗೊಳ್ಳುವರು.</p>.<p>ಬೆಂಗಳೂರಿನ ಎರಿಕ್ಸನ್ ಕಂಪನಿ ಎಂಜಿನಿಯರ್ ಸುನೀಲಕುಮಾರ್ ಕುಲಕರ್ಣಿ ದಿಕ್ಸೂಚಿ ಭಾಷಣ ಮಾಡುವರು. ಈ ಸಭೆಯ ಅಧ್ಯಕ್ಷತೆಯನ್ನು ದಿ ಇನ್ಸ್ಟಿಟ್ಯೂಟ್ ಆಫ್ ಆಫ್ ಎಂಜಿನಿಯರ್ಸ್ನ ಅಧ್ಯಕ್ಷ ಶ್ರೀಧರ ಪಾಂಡೆ ವಹಿಸುವರು.</p>.<p>ಇದೇ ಕಾರ್ಯಕ್ರಮದಲ್ಲಿ ಕಲಬುರಗಿಯ ಎಂಜಿನಿಯರ್ಗಳಾದ ಗಿರಿಧರ ಕುಲಕರ್ಣಿ, ನಾಗೇಂದ್ರಪ್ಪ ಬಿರಾದಾರ, ವಿಟಿಯು ಕಲಬುರಗಿ ಪ್ರಾದೇಶಿಕ ನಿರ್ದೇಶಕ ಪ್ರೊ.ಬಸವರಾಜ ಗಾದಗೆ, ಉದ್ಯಮಿ ಸಂಪತ್ ಗಿಲಡಾ, ಕೆಎಎಸ್ ಅಧಿಕಾರಿಯೂ ಆಗಿರುವ ಎಂಜಿನಿಯರ್ ಶ್ರೀಯಾಂಕಾ ಧನಶ್ರೀ, ಎಂಜಿನಿಯರ್ ಅನಿಲಕುಮಾರ್ ಕಾಡಾದಿ, ಪ್ರೊ.ನಾಗೇಂದ್ರ ಎಚ್. ಅವರನ್ನು ಸನ್ಮಾನಿಸಲಾಗುವುದು.</p>.<p>ಕಾರ್ಯಕ್ರಮದ ನಂತರ ಪ್ರಶಾಂತ್ ಕಾಂಬಳೆ, ಎಂಜಿನಿಯರ್ ಚಂದ್ರಶೇಖರ ಸುಲೆಪೇಟಕರ್ ಮತ್ತು ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರೊ.ಸೀತಾರಾಮ ಮುನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>