<p><strong>ಕಲಬುರ್ಗಿ</strong>: ‘ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಎಂಜಿನಿಯರ್ಗಳ ಪಾತ್ರ ಮಹತ್ವದ್ದಾಗಿದೆ. ವಿಶ್ವೇಶ್ವರಯ್ಯನವರು ಎಲ್ಲ ಎಂಜಿನಿಯರುಗಳಿಗೆ ಆದರ್ಶಪ್ರಾಯರಾಗಿದ್ದಾರೆ’ ಎಂದು ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿ.ವಿ. ಕುಲಪತಿ ಪ್ರೊ. ಬಿ. ಸತ್ಯನಾರಾಯಣ ಹೇಳಿದರು.</p>.<p>ಎಂಜಿನಿಯರ್ಗಳ ದಿನಾಚರಣೆ ಅಂಗವಾಗಿ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>‘ಯುವಕರು ದೇಶಾಭಿಮಾನ ಮತ್ತು ತಾಂತ್ರಿಕತೆಯ ಅವಶ್ಯಕತೆಗಳನ್ನು ಅರಿತುಕೊಂಡು ಅಧ್ಯಯನ ಶೀಲರಾಗಬೇಕು’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಶಂಭುಲಿಂಗಪ್ಪ ಅವರು, ವಿಶ್ವೇಶ್ವರಯ್ಯನವರ ಜೀವನದ ಘಟನೆಗಳು ಹಾಗೂ ಕೊಡುಗೆಗಳನ್ನು ಸವಿಸ್ತಾರವಾಗಿ ವಿವರಿಸಿದರು.</p>.<p>ಅಧ್ಯಕ್ಷೀಯ ಭಾಷಣ ಮಾಡಿದ ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಬಸವರಾಜ ಗಾದಗೆ, ಮಾನವತೆಯನ್ನು ರೂಢಿಸಿಕೊಳ್ಳಬೇಕಾದರೆ ಮೊದಲು ಕೊಡುವ ಗುಣವನ್ನು ಬೆಳೆಸಿಕೊಂಡು ಮಾನವತಾವಾದವನ್ನು ಸಾರಬೇಕು’ ಎಂದರು.</p>.<p>ರಕ್ತದಾನ ಮತ್ತು ನೇತ್ರದಾನದ ಅವಶ್ಯತೆಯನ್ನು ತಿಳಿಸಿ ದಾನ ಮಾಡಲು ಮುಂದೆ ಬರುವಂತೆ ಸಲಹೆ ನೀಡಿದರು.</p>.<p>ವಿಶೇಷ ಉಪನ್ಯಾಸ ನೀಡಿದ ನೇತ್ರ ತಜ್ಞೆ ಡಾ.ಸಂಗೀತಾ ಪಾಟೀಲ, ನೇತ್ರದಾನ ಹಾಗೂ ರಕ್ತದಾನದ ಮಹತ್ವವನ್ನು ತಿಳಿಸಿಕೊಟ್ಟರು.</p>.<p>ಅರುಣಕುಮಾರ ಲೋಯಾ ಮಾತನಾಡಿ, ಯುವ ಜನತೆಯಲ್ಲಿ ವಿಶ್ವೇಶ್ವರಯ್ಯನವರ ಗುಣಗಳ ಅಳವಡಿಕೆ ಅವಶ್ಯವಾಗಿದೆ’ ಎಂದರು.</p>.<p>ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಶಿವರಾಮನಗೌಡ ನಿರೂಪಿಸಿದರು. ಭಾರತೀಯ ರೆಡ್ಕ್ರಾಸ್ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ‘ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಎಂಜಿನಿಯರ್ಗಳ ಪಾತ್ರ ಮಹತ್ವದ್ದಾಗಿದೆ. ವಿಶ್ವೇಶ್ವರಯ್ಯನವರು ಎಲ್ಲ ಎಂಜಿನಿಯರುಗಳಿಗೆ ಆದರ್ಶಪ್ರಾಯರಾಗಿದ್ದಾರೆ’ ಎಂದು ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿ.ವಿ. ಕುಲಪತಿ ಪ್ರೊ. ಬಿ. ಸತ್ಯನಾರಾಯಣ ಹೇಳಿದರು.</p>.<p>ಎಂಜಿನಿಯರ್ಗಳ ದಿನಾಚರಣೆ ಅಂಗವಾಗಿ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.</p>.<p>‘ಯುವಕರು ದೇಶಾಭಿಮಾನ ಮತ್ತು ತಾಂತ್ರಿಕತೆಯ ಅವಶ್ಯಕತೆಗಳನ್ನು ಅರಿತುಕೊಂಡು ಅಧ್ಯಯನ ಶೀಲರಾಗಬೇಕು’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಶಂಭುಲಿಂಗಪ್ಪ ಅವರು, ವಿಶ್ವೇಶ್ವರಯ್ಯನವರ ಜೀವನದ ಘಟನೆಗಳು ಹಾಗೂ ಕೊಡುಗೆಗಳನ್ನು ಸವಿಸ್ತಾರವಾಗಿ ವಿವರಿಸಿದರು.</p>.<p>ಅಧ್ಯಕ್ಷೀಯ ಭಾಷಣ ಮಾಡಿದ ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಬಸವರಾಜ ಗಾದಗೆ, ಮಾನವತೆಯನ್ನು ರೂಢಿಸಿಕೊಳ್ಳಬೇಕಾದರೆ ಮೊದಲು ಕೊಡುವ ಗುಣವನ್ನು ಬೆಳೆಸಿಕೊಂಡು ಮಾನವತಾವಾದವನ್ನು ಸಾರಬೇಕು’ ಎಂದರು.</p>.<p>ರಕ್ತದಾನ ಮತ್ತು ನೇತ್ರದಾನದ ಅವಶ್ಯತೆಯನ್ನು ತಿಳಿಸಿ ದಾನ ಮಾಡಲು ಮುಂದೆ ಬರುವಂತೆ ಸಲಹೆ ನೀಡಿದರು.</p>.<p>ವಿಶೇಷ ಉಪನ್ಯಾಸ ನೀಡಿದ ನೇತ್ರ ತಜ್ಞೆ ಡಾ.ಸಂಗೀತಾ ಪಾಟೀಲ, ನೇತ್ರದಾನ ಹಾಗೂ ರಕ್ತದಾನದ ಮಹತ್ವವನ್ನು ತಿಳಿಸಿಕೊಟ್ಟರು.</p>.<p>ಅರುಣಕುಮಾರ ಲೋಯಾ ಮಾತನಾಡಿ, ಯುವ ಜನತೆಯಲ್ಲಿ ವಿಶ್ವೇಶ್ವರಯ್ಯನವರ ಗುಣಗಳ ಅಳವಡಿಕೆ ಅವಶ್ಯವಾಗಿದೆ’ ಎಂದರು.</p>.<p>ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಶಿವರಾಮನಗೌಡ ನಿರೂಪಿಸಿದರು. ಭಾರತೀಯ ರೆಡ್ಕ್ರಾಸ್ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>