ಶರಣಬಸವೇಶ್ವರ ವಸತಿ ಪಬ್ಲಿಕ್ ಪ್ರೌಢ ಶಾಲೆಯಿಂದ ಪ್ರಾರಂಭವಾದ ಜಾಥಾ ಚರ್ಚ್, ಅರಣ್ಯ ಭವನ ರಸ್ತೆ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಸಸಿ ನೆಡುವುದು, ಶಬ್ದ, ಪರಿಸರ, ನೀರು ಮಾಲಿನ್ಯ ತಡೆಗಟ್ಟುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.