ಹಾಲಿ ಅಧ್ಯಕ್ಷ ಅರುಣಕುಮಾರ ಪಾಟೀಲ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಿಕೊಳ್ಳದ ಮತ್ತೊಂದು ಬಣವು ಸಮಾಜದ ಹಿರಿಯ ಮುಖಂಡ ಜಿ.ಡಿ.ಅಣಕಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಒಪ್ಪಿದರೆ ಉಳಿದ ಆಕಾಂಕ್ಷಿಗಳು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಾಜದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿರುವ ಖಂಡ್ರೆ ಅರುಣಕುಮಾರ ಪಾಟೀಲ ವಿರೋಧಿ ಗುಂಪಿನಿಂದ ಪದಾಧಿಕಾರಿಗಳಾಗಿ ಆಯ್ಕೆ ಬಯಸಿ ಸ್ಪರ್ಧಿಸಿರುವವರ ನಾಮ ಪತ್ರ ವಾಪಸ್ ಪಡೆಯುವ ಪತ್ರಗಳನ್ನು ಪಡೆದುಕೊಂಡಿದ್ದಾರೆ.