ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜ್ಞಾ ಸಿಂಗ್ ಅವರು ಗಾಂಧಿ ಕೊಲೆಗಾರನ ವೈಭವೀಕರಣ ಮಾಡುತ್ತಿದ್ದು, ಇದು ಖಂಡನೀಯ. ರಾಷ್ಟ್ರವಿರೋಧಿ ಕೃತ್ಯಗಳಿಗೆ ಬಿಜೆಪಿಯವರು ಬೆಂಬಲ ನೀಡುತ್ತಿದ್ದಾರೆ. ಸೋಲಿನ ಭೀತಿಯಿಂದ ಮತಗಳ ಧೃವೀಕರಣಕ್ಕೆ ಮುಂದಾಗಿದ್ದಾರೆ. ಪಶ್ಚಿಮ ಬಂಗಾಲ ಸೇರಿ ಹಲವಾರು ಕಡೆ ಧಂಗೆ ಏಳಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.