‘ಅಂತರ್ಜಲ ಚೇತನ’ ಯೋಜನೆಗೆ ಚಾಲನೆ ನೀಡಿದ ಈಶ್ವರಪ್ಪ, ‘ಉದ್ಯೋಗ ಖಾತ್ರಿ ಯೋಜನೆಯಲ್ಲಿಅರಣ್ಯೀಕರಣ, ಬಾವಿಗಳ ಮರುಪೂರಣ, ಕೆರೆ–ಹೊಂಡ ತೋಡುವುದೂ ಸೇರಿದಂತೆ ಹಲವು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಆರ್ಟ್ ಆಫ್ ಲಿವಿಂಗ್ ಹಾಗೂ ಮೈರಾಡಾ ಸಂಸ್ಥೆಗಳು ಜಿಲ್ಲೆಯ ಪ್ರತಿ ಗ್ರಾಮದ ಪ್ರತಿ ಮನೆಗೂ ಹೋಗಿ ಮಳೆ ನೀರು ಇಂಗಿಸುವ ಅರಿವು ಮೂಡಿಸಲಿವೆ. ಮುಂದಿನ ಮೂರು ವರ್ಷದಲ್ಲಿ ಅಂತರ್ಜಲ ಇಂಗುವಿಕೆ ಪ್ರಮಾಣವನ್ನು ಶೇಕಡ 30ಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ’ ಎಂದರು.