ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದಾಯದ ಅಭಿವೃದ್ಧಿಗೆ ಈಡಿಗ ಟ್ರಸ್ಟ್ ಸ್ಥಾಪನೆ: ವಿಖ್ಯಾತಾನಂದ ಸ್ವಾಮೀಜಿ

ಬ್ರಹ್ಮಶ್ರೀ ನಾರಾಯಣಗುರು ಮಠದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ
Last Updated 12 ಜೂನ್ 2022, 20:16 IST
ಅಕ್ಷರ ಗಾತ್ರ

ಕಲಬುರಗಿ: ‘ಆರ್ಯ ಈಡಿಗ ಸಮುದಾ ಯದ ಕಟ್ಟಕಡೆಯ ಮಗುವಿಗೂ ಉನ್ನತ ಶಿಕ್ಷಣ ಹಾಗೂ ಜನಾಂಗದ ಸಮಗ್ರ ಅಭಿವೃದ್ಧಿಗಾಗಿ ಈಡಿಗ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಲಾಗುವುದು’ ಎಂದು ಸೋಲೂರಿನ ರೇಣುಕಾ ಪೀಠ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಮಠದಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.

ನಗರದಲ್ಲಿ ಜೆ.ಪಿ ನಾರಾಯಣಸ್ವಾಮಿ ಪ್ರತಿಷ್ಠಾನದ ವತಿಯಿಂದ ಭಾನುವಾರ ನಡೆದ ಕಾರ್ಯಕ್ರಮದಲ್ಲಿಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ಪ್ರೋತ್ಸಾಹ ಧನದ ಚೆಕ್ ವಿತರಿಸಿ ಅವರು ಮಾತನಾಡಿದರು.

‘ಈಡಿಗ (ಇಡಿಐಜಿಎ) ಟ್ರಸ್ಟ್‌ ಅಡಿ ಸಮುದಾಯದ 2 ಲಕ್ಷ ಜನರನ್ನು ಸದಸ್ಯರನ್ನಾಗಿಸುವ ಗುರಿ ಇದೆ.₹ 250 ಕೊಟ್ಟು ಸದಸ್ಯರಾದವರಿಗೆ ದಿನಕ್ಕೆ ₹ 1 ವಾಪಸ್ ಕೊಡುತ್ತೇವೆ. ಸಂಗ್ರಹವಾದ ಹಣವನ್ನು ಉದ್ಯಮ ಸ್ಥಾಪನೆ, ವಾಹನ ಖರೀದಿ, ಮನೆ ನಿರ್ಮಾಣಕ್ಕಾಗಿ ಶೇ 4ರ ಬಡ್ಡಿದರದಲ್ಲಿ ನೀಡಲಾಗುವುದು’ ಎಂದರು.

‘ಸೇಂದಿ ಇಳಿಸುವ ಕುಲಕಸುಬು ತೆಗೆದುಹಾಕಿದ ನಂತರ ಈಡಿಗ ಸಮುದಾಯ ತೀವ್ರ ತೊಂದರೆಗೆ ಒಳಗಾಗಿದೆ. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಆಗುತ್ತಿಲ್ಲ.ಹೀಗಾಗಿ, ಟ್ರಸ್ಟ್‌ ವತಿಯಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುತ್ತೇವೆ. ಈಗಾಗಲೇ ಕಾರವಾರ, ಶಿವಮೊಗ್ಗ, ಕೊಡಗಿನಲ್ಲಿ ಜಾಗ ಇದೆ. ಶೀಘ್ರವೇ ಯಾದಗಿರಿಯಲ್ಲಿ ಶಾಲೆ ಸ್ಥಾಪಿಸುತ್ತೇವೆ’ ಎಂದು ಟ್ರಸ್ಟ್‌ನಿಂದ ಹಮ್ಮಿಕೊಂಡ ಚಟುವಟಿಕೆಗಳ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT