ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್ಥಿಕವಾಗಿ ಹಿಂದುಳಿದವರಲ್ಲಿ ಪ್ರತಿಭೆ ಇದ್ದರೂ ಶಿಕ್ಷಣ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ತೊಡಕಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಲ್ಲಬೇಕಾದ ನ್ಯಾಯವನ್ನು ಒದಗಿಸಿಕೊಡಲು ಸರ್ಕಾರ ಮುಂದಾಗಬೇಕು’ ಎಂದು ಮನವಿ ಮಾಡಿದರು.