<p><strong>ಕಲಬುರಗಿ:</strong> ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡಿದ್ದು, ರಾಜ್ಯ ಸರ್ಕಾರ ಅದನ್ನು ರಾಜ್ಯದಲ್ಲಿ ಜಾರಿಗೊಳಿಸಿಲ್ಲ. ಕೂಡಲೇ ಈ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ಗೋವಿಂದ ಕುಲಕರ್ಣಿ ಆಗ್ರಹಿಸಿದರು.</p>.<p>ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿ ಸಿಗುತ್ತಿದೆ. ರಾಜ್ಯದಲ್ಲಿ ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡಬಾರದು’ ಎಂದರು.</p>.<p>‘ಇಡಬ್ಲ್ಯುಎಸ್ ಮೀಸಲಾತಿ ಯಾವುದೇ ಸಮುದಾಯಕ್ಕೆ ವಿಶೇಷ ಸೌಲಭ್ಯವಲ್ಲ, ಬದಲಾಗಿ ಆರ್ಥಿಕ ಹಿನ್ನಡೆ ಆಧಾರದ ಮೇಲೆ ನೀಡಲಾಗುವ ಸಂವಿಧಾನಬದ್ಧ ಹಕ್ಕು. ರಾಜ್ಯದಲ್ಲಿ ಮೀಸಲಾತಿ ಜಾರಿಗೊಳಿಸದ್ದರಿಂದ ಅರ್ಹ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.</p>.<p>ಪತ್ರಕರ್ತೆ ಮೇಲೆ ಹಲ್ಲೆಗೆ ಖಂಡನೆ: ದೆಹಲಿ ವಿಶ್ವವಿದ್ಯಾಲಯ ಉತ್ತರ ಕ್ಯಾಂಪಸ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪತ್ರಕರ್ತೆ ರುಚಿ ತಿವಾರಿ ಮೇಲೆ ನಡೆದಿದೆ ಎನ್ನಲಾದ ಜಾತಿ ಆಧಾರಿತ ದೌರ್ಜನ್ಯ, ಅವಮಾನ ಮತ್ತು ಹಿಂಸೆ ಖಂಡನೀಯ. ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಪತ್ರಕರ್ತರ ಸುರಕ್ಷತೆ ಮತ್ತು ಗೌರವ ಕಾಪಾಡುವುದು ಸರ್ಕಾರದ ಕೆಲಸ. ಈ ಬಗ್ಗೆ ನಿಷ್ಟಪಕ್ಷಪಾತ ಮತ್ತು ತ್ವರಿತವಾಗಿ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಬ್ರಾಹ್ಮಣ ಮಹಾಸಂಘದ ಜಿಲ್ಲಾಧ್ಯಕ್ಷ ಅವಿನಾಶ ಕುಲಕರ್ಣಿ, ಗುರುರಾಜ ಭರತನೂರ್, ಗುರುರಾಜ ಕುಲಕರ್ಣಿ, ಪಿ.ವಿ.ಜೋಶಿ, ನಾರಾಯಣ ಜಾಹಗೀರದಾರ್, ಪ್ರಸನ್ನ ದೇಶಪಾಂಡೆ, ಪ್ರದೀಪ ಕುಲಕರ್ಣಿ, ಕಿಶೋರ ಕಟ್ಟಿ, ಅಮಿತ್ ಕುಲಕರ್ಣಿ ಗೋಷ್ಠಿಯಲ್ಲಿದ್ದರು.</p>.<div><blockquote>ಬ್ರಾಹ್ಮಣ ಮಹಾಸಂಘವು 32 ವಿವಿಧ ವಿಭಾಗಗಳನ್ನು ಹೊಂದಿದ್ದು ಮೆಟ್ರೊ ನಗರಗಳಲ್ಲಿ ಬ್ರಾಹ್ಮಣ ಭವನಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲಿ ಹಾಸ್ಟೆಲ್ಗಳನ್ನು ನಿರ್ಮಿಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು </blockquote><span class="attribution">ಗೋವಿಂದ ಕುಲಕರ್ಣಿ ರಾಷ್ಟ್ರೀಯ ಅಧ್ಯಕ್ಷ ಬ್ರಾಹ್ಮಣ ಮಹಾಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡಿದ್ದು, ರಾಜ್ಯ ಸರ್ಕಾರ ಅದನ್ನು ರಾಜ್ಯದಲ್ಲಿ ಜಾರಿಗೊಳಿಸಿಲ್ಲ. ಕೂಡಲೇ ಈ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ಗೋವಿಂದ ಕುಲಕರ್ಣಿ ಆಗ್ರಹಿಸಿದರು.</p>.<p>ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಉದ್ಯೋಗಗಳಲ್ಲಿ ಶೇ 10ರಷ್ಟು ಮೀಸಲಾತಿ ಸಿಗುತ್ತಿದೆ. ರಾಜ್ಯದಲ್ಲಿ ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡಬಾರದು’ ಎಂದರು.</p>.<p>‘ಇಡಬ್ಲ್ಯುಎಸ್ ಮೀಸಲಾತಿ ಯಾವುದೇ ಸಮುದಾಯಕ್ಕೆ ವಿಶೇಷ ಸೌಲಭ್ಯವಲ್ಲ, ಬದಲಾಗಿ ಆರ್ಥಿಕ ಹಿನ್ನಡೆ ಆಧಾರದ ಮೇಲೆ ನೀಡಲಾಗುವ ಸಂವಿಧಾನಬದ್ಧ ಹಕ್ಕು. ರಾಜ್ಯದಲ್ಲಿ ಮೀಸಲಾತಿ ಜಾರಿಗೊಳಿಸದ್ದರಿಂದ ಅರ್ಹ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.</p>.<p>ಪತ್ರಕರ್ತೆ ಮೇಲೆ ಹಲ್ಲೆಗೆ ಖಂಡನೆ: ದೆಹಲಿ ವಿಶ್ವವಿದ್ಯಾಲಯ ಉತ್ತರ ಕ್ಯಾಂಪಸ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪತ್ರಕರ್ತೆ ರುಚಿ ತಿವಾರಿ ಮೇಲೆ ನಡೆದಿದೆ ಎನ್ನಲಾದ ಜಾತಿ ಆಧಾರಿತ ದೌರ್ಜನ್ಯ, ಅವಮಾನ ಮತ್ತು ಹಿಂಸೆ ಖಂಡನೀಯ. ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆಯಾಗಿದ್ದು, ಪತ್ರಕರ್ತರ ಸುರಕ್ಷತೆ ಮತ್ತು ಗೌರವ ಕಾಪಾಡುವುದು ಸರ್ಕಾರದ ಕೆಲಸ. ಈ ಬಗ್ಗೆ ನಿಷ್ಟಪಕ್ಷಪಾತ ಮತ್ತು ತ್ವರಿತವಾಗಿ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಬ್ರಾಹ್ಮಣ ಮಹಾಸಂಘದ ಜಿಲ್ಲಾಧ್ಯಕ್ಷ ಅವಿನಾಶ ಕುಲಕರ್ಣಿ, ಗುರುರಾಜ ಭರತನೂರ್, ಗುರುರಾಜ ಕುಲಕರ್ಣಿ, ಪಿ.ವಿ.ಜೋಶಿ, ನಾರಾಯಣ ಜಾಹಗೀರದಾರ್, ಪ್ರಸನ್ನ ದೇಶಪಾಂಡೆ, ಪ್ರದೀಪ ಕುಲಕರ್ಣಿ, ಕಿಶೋರ ಕಟ್ಟಿ, ಅಮಿತ್ ಕುಲಕರ್ಣಿ ಗೋಷ್ಠಿಯಲ್ಲಿದ್ದರು.</p>.<div><blockquote>ಬ್ರಾಹ್ಮಣ ಮಹಾಸಂಘವು 32 ವಿವಿಧ ವಿಭಾಗಗಳನ್ನು ಹೊಂದಿದ್ದು ಮೆಟ್ರೊ ನಗರಗಳಲ್ಲಿ ಬ್ರಾಹ್ಮಣ ಭವನಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲಿ ಹಾಸ್ಟೆಲ್ಗಳನ್ನು ನಿರ್ಮಿಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು </blockquote><span class="attribution">ಗೋವಿಂದ ಕುಲಕರ್ಣಿ ರಾಷ್ಟ್ರೀಯ ಅಧ್ಯಕ್ಷ ಬ್ರಾಹ್ಮಣ ಮಹಾಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>