ಕಲಬುರಗಿ: ‘ಕೆಕೆಆರ್ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಅಜಯಸಿಂಗ್ ಅವರ ಮಾಜಿ ಆಪ್ತ ಸಹಾಯಕ ಪರಶುರಾಮ ನೆಲೋಗಿ ಅವರು ಕಾಮಗಾರಿ ಗುತ್ತಿಗೆ, ಪ್ರಥಮ ದರ್ಜೆ ಸಹಾಯಕ ಹುದ್ದೆ, ಅಂಗನವಾಡಿ ಕಾರ್ಯಕರ್ತೆ ನೇಮಕ, ಕೋರ್ಟ್ನಲ್ಲಿ ಜವಾನ ಹುದ್ದೆ ಕೊಡಿಸುವುದಾಗಿ ಹಲವಾರು ಜನರಿಂದ ಸುಮಾರು ₹1 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಗುತ್ತಿಗೆದಾರ ರಾಜಾರಾಮಪ್ಪ ನಾಯಕ ಆಗ್ರಹಿಸಿದರು.