‘ಗೊಂದಲದಿಂದ ವಿತರಣೆಯಲ್ಲಿ ವಿಳಂಬ’
‘ಮೌಲ್ಯಮಾಪನ ವಿಭಾಗದ ಸಿಬ್ಬಂದಿಯವರು ಯಾವ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಬೇಕು ಎಂದು ಗೊಂದಲಕ್ಕೆ ಒಳಗಾಗಿದ್ದರು. ಇದರಿಂದ ವಿತರಣೆಯಲ್ಲಿ ತಡವಾಗಿದೆ. ಯಾರಿಂದ ಎಲ್ಲಿ ತಪ್ಪಾಗಿದೆ ಎಂದು ಪರಿಶೀಲಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಗುಲಬರ್ಗಾ ವಿವಿ ಪ್ರಭಾರ ಕುಲಪತಿ ಪ್ರೊ.ಜಿ. ಶ್ರೀರಾಮುಲು ಅವರು ‘ಪ್ರಜಾವಾಣಿ’ಗೆ ತಿಳಿಸಿದರು. ‘ಬೀದರ್ ಕಲಬುರಗಿ ಜೇವರ್ಗಿ ಸೇರಿದಂತೆ ಕೆಲವು ಕಾಲೇಜುಗಳ ಕೇಂದ್ರಗಳಲ್ಲಿ ತಡವಾಗಿದೆ. ಒಇ ಪ್ರಶ್ನೆ ಪತ್ರಿಕೆಗಳು ಹೆಚ್ಚಾಗಿದ್ದು ಮೇಲ್ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿ ಸರಿಪಡಿಸಲಾಗಿದೆ. ಯುಯುಸಿಎಂಎಸ್ನಲ್ಲಿ ಹಾಜರಾತಿ ದಾಖಲಿಸುವ ಬಗ್ಗೆಯೂ ಪರಿಶೀಲನೆ ಮಾಡಲಾಗುವುದು’ ಎಂದರು.