ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮಾಹಿತಿ ನೀಡಿ, ಹವಾಮಾನ ಇಲಾಖೆ ಪ್ರಕಾರ ಜಿಲ್ಲೆಯಲ್ಲಿ ಸೆ.11 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವದರಿಂದ ಎಲ್ಲಾ ಅಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಪ್ರವಾಹ ಉಂಟಾದಲ್ಲಿ ಜನರ ರಕ್ಷಣೆ ಕೈಗೊಳ್ಳಬೇಕು ಮತ್ತು ಮಳೆಯಿಂದ ಗ್ರಾಮಗಳಲ್ಲಿ ಹಾನಿಯಾಗುವ ಬಗ್ಗೆ ಲಕ್ಷ್ಯ ವಹಿಸಬೇಕು ಎಂದು ಅವರು ತಿಳಿಸಿದರು.