ಅದೇ ದಿನ ಬೆಳಿಗ್ಗೆ 6 ಗಂಟೆಗೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಕಳಸಾರೋಹಣ, ಮಧ್ಯಾಹ್ನ 2.30ಕ್ಕೆ ದೇವಸ್ಥಾನ ಆವರಣದಲ್ಲಿ ಪುರಾಣ ಮಂಗಲ, ಧರ್ಮಸಭೆ ನಡೆಯಲಿದೆ. ಶಾಕಾಪುರದ ವಿಶ್ವಾರಾಧ್ಯ ತಪೋವನದ ಡಾ.ಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಓಂಕಾರ ಬೇನೂರಿನ ಮಹಾಲಿಂಗೇಶ್ವರ ಸಂಸ್ಥಾನದ ಸಿದ್ಧರೇಣುಕ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ.