ಆರ್ಕೆಎಸ್ ಸಂಘಟನೆಯ ಮುಖಂಡ ಗುಂಡಣ್ಣ ಎಂ.ಕೆ ಅವರು ಮಾತನಾಡಿ, 'ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ರೈತ ಮಹಿಳೆಯರು ಸಹ ಮಕ್ಕಳೊಂದಿಗೆ ಬಿತ್ತನೆ ಬೀಜಕ್ಕಾಗಿ ಹಗಲು ರಾತ್ರಿಯೆನ್ನದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಚಿತ್ತಾಪುರ ತಾಲ್ಲೂಕಿಗೆ 2500 ಕ್ವಿಂಟಲ್ ಶೇಂಗಾ ಬೀಜದ ಬೇಡಿಕೆ ಇದ್ದರೆ ರಾಜ್ಯ ಸರ್ಕಾರ ಕೇವಲ 100 ಕ್ವಿಂಟಲ್ ಕಳುಹಿಸಿದೆ. ಬಿತ್ತನೆಗೆ ಸಜ್ಜು ಮಾಡಿದ ಜಮೀನು ಈಗ ಕಸ ಕಡ್ಡಿಗಳಿಂದ ತುಂಬಿ ಹೋಗಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಮತ್ತೆ ಸಿದ್ಧಪಡಿಸಬೇಕಾದ ಪರಿಸ್ಥಿತಿ ತಲೆದೂರಿದೆ. ಸರ್ಕಾರ ಸಮಸ್ಯೆಯನ್ನು ತಕ್ಷಣ ಇತ್ಯರ್ಥಪಡಿಸಬೇಕು' ಎಂದು ಆಗ್ರಹಿಸಿದರು.