ಕಂಟೆಪ್ಪಾ ಪೀರಣ್ಣ ವಾಘೆ (60) ಮೃತ ರೈತ. ಪಿಕೆಪಿಎಸ್ ಸಹಕಾರ ಸಂಘದಲ್ಲಿ ₹2.50 ಲಕ್ಷ ಸಾಲ ಪಡೆದಿದ್ದರು. ಜತೆಗೆ ಖಾಸಗಿಯವರಿಂದಲೂ ಸಾಲ ಪಡೆದಿದ್ದಾರೆ. ಬೆಳೆದ ಫಸಲು ಕೈಗೆ ಸಿಗದೆ ನಷ್ಟವುಂಟಾಗಿದ್ದರಿಂದ ಹಣಕಾಸಿನ ತೊಂದರೆಯುಂಟಾಗಿ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಮಂಗಲಬಾಯಿ ದೂರಿನಲ್ಲಿ ತಿಳಿಸಿದ್ದಾರೆ. ಮೃತ ರೈತಗೆ ಮೂವರು ಗಂಡು ಮಕ್ಕಳಿದ್ದಾರೆ. ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಶಿವಕುಮಾರ ಬಳತೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ.