ಶರ್ಫುದ್ದೀನ್ ಅವರು ಮಂಗಲಗಿಯಲ್ಲಿ 5.8ಎಕರೆ ಜಮೀನು ಹೊಂದಿದ್ದರು. ಜಮೀನನ್ನು ಕಾಳಗಿ ಎಸ್ಬಿಐ ಬ್ಯಾಂಕ್ ಶಾಖೆಗೆ ಅಡವಿಟ್ಟು ಸಾಲ ಪಡೆದಿದ್ದರು. ಆದರೆ, ಮೂರು ವರ್ಷಗಳಿಂದ ಫಸಲು ಕೈಕೊಟ್ಟಿರುವುದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.