<p><strong>ಕಾಳಗಿ:</strong> ತಾಲ್ಲೂಕಿನ ಕೊಡದೂರ ಗ್ರಾಮದಲ್ಲಿ ಮಂಗಳವಾರ ರೈತ ಮಲ್ಲಿಕಾರ್ಜುನ ಬಸಪ್ಪ ಮುಂದಿನಮನಿ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.</p>.<p>ಒಟ್ಟು 3.59 ಎಕರೆ ಜಮೀನು ಇರುವ ರೈತ ಮಲ್ಲಿಕಾರ್ಜುನ ಬೇಸಾಯಕ್ಕಾಗಿ ಕಾಳಗಿ ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದರು.</p>.<p>‘ಬೆಳೆ ನಷ್ಟವಾದ ಪರಿಣಾಮ ಸಾಲ ತೀರಿಸಲಾಗದೆ ನನ್ನ ಗಂಡ ನೇಣಿಗೆ ಶರಣಾಗಿದ್ದಾರೆ’ ಎಂದು ಪತ್ನಿ ಶಾಂತಮ್ಮ ನೀಡಿದ ದೂರಿನನ್ವಯ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಾಧ ಪಿಎಸ್ಐ ಅಮೋಜ್ ಕಾಂಬಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ:</strong> ತಾಲ್ಲೂಕಿನ ಕೊಡದೂರ ಗ್ರಾಮದಲ್ಲಿ ಮಂಗಳವಾರ ರೈತ ಮಲ್ಲಿಕಾರ್ಜುನ ಬಸಪ್ಪ ಮುಂದಿನಮನಿ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.</p>.<p>ಒಟ್ಟು 3.59 ಎಕರೆ ಜಮೀನು ಇರುವ ರೈತ ಮಲ್ಲಿಕಾರ್ಜುನ ಬೇಸಾಯಕ್ಕಾಗಿ ಕಾಳಗಿ ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದರು.</p>.<p>‘ಬೆಳೆ ನಷ್ಟವಾದ ಪರಿಣಾಮ ಸಾಲ ತೀರಿಸಲಾಗದೆ ನನ್ನ ಗಂಡ ನೇಣಿಗೆ ಶರಣಾಗಿದ್ದಾರೆ’ ಎಂದು ಪತ್ನಿ ಶಾಂತಮ್ಮ ನೀಡಿದ ದೂರಿನನ್ವಯ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಾಧ ಪಿಎಸ್ಐ ಅಮೋಜ್ ಕಾಂಬಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>