<p><strong>ಕಲಬುರ್ಗಿ: </strong>ಉತ್ತರಪ್ರದೇಶದಲ್ಲಿ ರೈತರ ಸಾವಿಗೆ ಸರ್ಕಾರದ ಧೋರಣೆಯ ಕಾರಣ. ಇದರ ಹೊಣೆ ಹೊತ್ತು ಸಚಿವ ಅರ್ಜುನ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಂಯುಕ್ತ– ಹೋರಾಟ ಕರ್ನಾಟಕ ಕಲಬುರ್ಗಿ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಹಿಂಸಾಚಾರದಲ್ಲಿ ನಾಲ್ವರು ರೈತರ ದಾರುಣ ಹತ್ಯೆಯಾಗಿದೆ. ಇದರಲ್ಲಿ ಸಚಿವರ ಪುತ್ರ ಹಾಗೂ ಸಂಬಂಧಿಕರ ಕೈವಾಡವಿದೆ. ಆದ್ದರಿಂದ ಪ್ರಧಾನಿ ಮೋದಿ ಅವರು ಸಚಿವ ಅರ್ಜುನ್ ಮಿಶ್ರಾ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಮೃತ ರೈತರ ಕುಟುಂಬದವರಿಗೆ ತಲಾ ₹ 1 ಕೋಟಿ ಪರಿಹಾರ ನೀಡಬೇಕು. ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳ ತಿದ್ದುಪಡಿ ಹಿಂದಕ್ಕೆ ಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಲ್ಲಿಕಾರ್ಜುನ ಪಾಟೀಲ, ಎಸ್.ಆರ್. ಕೊಲ್ಲೂರ, ಭೀಮಶೆಟ್ಟಿ ಯಂಪಳ್ಳಿ, ನಾಗೇಂದ್ರಪ್ಪ ಥಂಬೆ, ಅರ್ಜುನ್ ಗೊಬ್ಬೂರ, ನಾಗಯ್ಯಸ್ವಾಮಿ, ಮೇಘರಾಜ ಕಠಾರೆ, ಜಗದೇವಿ ನೂಲಕರ, ಕೆ.ನೀಲಾ, ಪಾಂಡುರಂಗ ಮಾವಿನಕರ<br />ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಉತ್ತರಪ್ರದೇಶದಲ್ಲಿ ರೈತರ ಸಾವಿಗೆ ಸರ್ಕಾರದ ಧೋರಣೆಯ ಕಾರಣ. ಇದರ ಹೊಣೆ ಹೊತ್ತು ಸಚಿವ ಅರ್ಜುನ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಂಯುಕ್ತ– ಹೋರಾಟ ಕರ್ನಾಟಕ ಕಲಬುರ್ಗಿ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಹಿಂಸಾಚಾರದಲ್ಲಿ ನಾಲ್ವರು ರೈತರ ದಾರುಣ ಹತ್ಯೆಯಾಗಿದೆ. ಇದರಲ್ಲಿ ಸಚಿವರ ಪುತ್ರ ಹಾಗೂ ಸಂಬಂಧಿಕರ ಕೈವಾಡವಿದೆ. ಆದ್ದರಿಂದ ಪ್ರಧಾನಿ ಮೋದಿ ಅವರು ಸಚಿವ ಅರ್ಜುನ್ ಮಿಶ್ರಾ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಮೃತ ರೈತರ ಕುಟುಂಬದವರಿಗೆ ತಲಾ ₹ 1 ಕೋಟಿ ಪರಿಹಾರ ನೀಡಬೇಕು. ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳ ತಿದ್ದುಪಡಿ ಹಿಂದಕ್ಕೆ ಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಲ್ಲಿಕಾರ್ಜುನ ಪಾಟೀಲ, ಎಸ್.ಆರ್. ಕೊಲ್ಲೂರ, ಭೀಮಶೆಟ್ಟಿ ಯಂಪಳ್ಳಿ, ನಾಗೇಂದ್ರಪ್ಪ ಥಂಬೆ, ಅರ್ಜುನ್ ಗೊಬ್ಬೂರ, ನಾಗಯ್ಯಸ್ವಾಮಿ, ಮೇಘರಾಜ ಕಠಾರೆ, ಜಗದೇವಿ ನೂಲಕರ, ಕೆ.ನೀಲಾ, ಪಾಂಡುರಂಗ ಮಾವಿನಕರ<br />ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>