ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ, ರಾಜ್ಯದ ವಿವಿಧ ರೈತ ಸಂಘಟನೆಗಳ ಮುಖಂಡರನ್ನು ಬಂಧಿಸಲಾಗಿದೆ. ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ರಾಜ್ಯ ನಾಯಕರಾದ ಶಿವಪ್ರಕಾಶ್ ಎಚ್.ಪಿ. ಮತ್ತು ಎಐಯುಟಿಯುಸಿಯ ಶ್ರೀಕಾಂತ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಚಾಮರಸ ಮಾಲಿಪಾಟೀಲ, ಐಕ್ಯ ಹೋರಾಟ ಸಮಿತಿಯ ಪ್ರಕಾಶ್ ಕಮ್ಮರಡಿ ಮೊದಲಾದ ನಾಯಕರು ಬಂಧನಕ್ಕೊಳಗಾಗಿದ್ದಾರೆ. ರೈತರನ್ನು ಮನವೊಲಿಸಲು ಕೈಲಾಗದ ಸರ್ಕಾರ ಬಲಪ್ರಯೋಗದ ಮೂಲಕ ಹೋರಾಟವನ್ನು ಬಗ್ಗು ಬಡಿಯುವ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ. ಬಂಧನಕ್ಕೊಳಗಾದ ಹೋರಾಟಗಾರರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.