<p><strong>ಕಲಬುರಗಿ: ಪ್ರ</strong>ತಿ ಕ್ವಿಂಟಲ್ ತೊಗರಿಗೆ ₹12,500 ಎಂಎಸ್ಪಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ಜಂಟಿ ಒಕ್ಕೂಟವಾದ ಸಂಯುಕ್ತ ಹೋರಾಟ ಕರ್ನಾಟಕ (ಎಸ್ಕೆಎಂ) ಜಿಲ್ಲಾ ಸಮಿತಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಶುಕ್ರವಾರ ತಾತ್ಕಾಲಿಕವಾಗಿ ಹಿಂಪಡೆದಿದೆ.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಐವಾನ್–ಎ–ಶಾಹಿ ಅತಿಥಿಗೃಹದತ್ತ ಸಾಗುವ ರಸ್ತೆಯಲ್ಲಿ ಟ್ರ್ಯಾಕ್ಟರ್ಗಳು, ಎತ್ತಿನ ಬಂಡಿಗಳೊಂದಿಗೆ ಗುರುವಾರ ಧರಣಿ ಆರಂಭಗೊಂಡಿತ್ತು. ದಿನವಿಡೀ ಧರಣಿ ಬಳಿಕ ರೈತ ಮುಖಂಡರು ರಸ್ತೆಯಲ್ಲೇ ರಾತ್ರಿ ಕಳೆದಿದ್ದರು. ಎರಡನೇ ದಿನವಾದ ಶುಕ್ರವಾರ ಮಧ್ಯಾಹ್ನ 3 ಗಂಟೆ ತನಕವೂ ಧರಣಿನಿರತರು ರಸ್ತೆಯಲ್ಲೇ ಕುಳಿತಿದ್ದರು.</p>.<p>ಮಧ್ಯಾಹ್ನ 3 ಗಂಟೆಯಿಂದ 4 ಗಂಟೆ ತನಕ ಸರ್ದಾರ್ ಪಟೇಲ್ ವೃತ್ತ ಹಾಗೂ ಜಗತ್ ವೃತ್ತ ಸಂಪರ್ಕಿಸುವ ಎರಡು ಬದಿಯ ರಸ್ತೆಗಳಲ್ಲಿ ಟ್ರ್ಯಾಕ್ಟರ್, ಎತ್ತಿನ ಬಂಡಿಗಳೊಂದಿಗೆ ರೈತರು ಮಾನವ ಸರಪಳಿ ನಿರ್ಮಿಸಿದರು. ವಾಹನಗಳ ಸಂಚಾರ ತಡೆದು ಘೋಷಣೆ ಮೊಳಗಿಸಿದರು. ಬಾರಕೋಲ ಝಳಪಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಮುಖಂಡರಾದ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್., ಎ.ಬಿ.ಹೊಸಮನಿ ಸೇರಿದಂತೆ ಹಲವರು ಮಾತನಾಡಿದರು. ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಬಳಿಕ ಸೇಡಂ ಉಪವಿಭಾಗಾಧಿಕಾರಿ ಪ್ರಭು ರೆಡ್ಡಿ ಅವರಿಗೆ ಒಂಬತ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಹೋರಾಟಗಾರ ಶರಣಬಸಪ್ಪ ಮಮಶೆಟ್ಟಿ, ‘ತೊಗರಿ ಎಂಎಸ್ಪಿ ಹೆಚ್ಚಳ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ ತೊಗರಿಗೆ ತಲಾ ₹1 ಸಾವಿರ ಪ್ರೋತ್ಸಾಹಧನ ಸೇರಿದಂತೆ ರೈತರ ಹಿತಾಸಕ್ತಿ ಕಾಯುವ ಬೇಡಿಕೆಗಳನ್ನು ಜನವರಿ 26ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು. ಅಲ್ಲಿಯ ತನಕ ತಾತ್ಕಾಲಿಕವಾಗಿ ಹೋರಾಟ ಹಿಂಪಡೆಯಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ಪ್ರ</strong>ತಿ ಕ್ವಿಂಟಲ್ ತೊಗರಿಗೆ ₹12,500 ಎಂಎಸ್ಪಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ಜಂಟಿ ಒಕ್ಕೂಟವಾದ ಸಂಯುಕ್ತ ಹೋರಾಟ ಕರ್ನಾಟಕ (ಎಸ್ಕೆಎಂ) ಜಿಲ್ಲಾ ಸಮಿತಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಶುಕ್ರವಾರ ತಾತ್ಕಾಲಿಕವಾಗಿ ಹಿಂಪಡೆದಿದೆ.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಐವಾನ್–ಎ–ಶಾಹಿ ಅತಿಥಿಗೃಹದತ್ತ ಸಾಗುವ ರಸ್ತೆಯಲ್ಲಿ ಟ್ರ್ಯಾಕ್ಟರ್ಗಳು, ಎತ್ತಿನ ಬಂಡಿಗಳೊಂದಿಗೆ ಗುರುವಾರ ಧರಣಿ ಆರಂಭಗೊಂಡಿತ್ತು. ದಿನವಿಡೀ ಧರಣಿ ಬಳಿಕ ರೈತ ಮುಖಂಡರು ರಸ್ತೆಯಲ್ಲೇ ರಾತ್ರಿ ಕಳೆದಿದ್ದರು. ಎರಡನೇ ದಿನವಾದ ಶುಕ್ರವಾರ ಮಧ್ಯಾಹ್ನ 3 ಗಂಟೆ ತನಕವೂ ಧರಣಿನಿರತರು ರಸ್ತೆಯಲ್ಲೇ ಕುಳಿತಿದ್ದರು.</p>.<p>ಮಧ್ಯಾಹ್ನ 3 ಗಂಟೆಯಿಂದ 4 ಗಂಟೆ ತನಕ ಸರ್ದಾರ್ ಪಟೇಲ್ ವೃತ್ತ ಹಾಗೂ ಜಗತ್ ವೃತ್ತ ಸಂಪರ್ಕಿಸುವ ಎರಡು ಬದಿಯ ರಸ್ತೆಗಳಲ್ಲಿ ಟ್ರ್ಯಾಕ್ಟರ್, ಎತ್ತಿನ ಬಂಡಿಗಳೊಂದಿಗೆ ರೈತರು ಮಾನವ ಸರಪಳಿ ನಿರ್ಮಿಸಿದರು. ವಾಹನಗಳ ಸಂಚಾರ ತಡೆದು ಘೋಷಣೆ ಮೊಳಗಿಸಿದರು. ಬಾರಕೋಲ ಝಳಪಿಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಮುಖಂಡರಾದ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್., ಎ.ಬಿ.ಹೊಸಮನಿ ಸೇರಿದಂತೆ ಹಲವರು ಮಾತನಾಡಿದರು. ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಬಳಿಕ ಸೇಡಂ ಉಪವಿಭಾಗಾಧಿಕಾರಿ ಪ್ರಭು ರೆಡ್ಡಿ ಅವರಿಗೆ ಒಂಬತ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಹೋರಾಟಗಾರ ಶರಣಬಸಪ್ಪ ಮಮಶೆಟ್ಟಿ, ‘ತೊಗರಿ ಎಂಎಸ್ಪಿ ಹೆಚ್ಚಳ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ ತೊಗರಿಗೆ ತಲಾ ₹1 ಸಾವಿರ ಪ್ರೋತ್ಸಾಹಧನ ಸೇರಿದಂತೆ ರೈತರ ಹಿತಾಸಕ್ತಿ ಕಾಯುವ ಬೇಡಿಕೆಗಳನ್ನು ಜನವರಿ 26ರೊಳಗೆ ಈಡೇರಿಸಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು. ಅಲ್ಲಿಯ ತನಕ ತಾತ್ಕಾಲಿಕವಾಗಿ ಹೋರಾಟ ಹಿಂಪಡೆಯಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>