<p><strong>ಕಲಬುರಗಿ:</strong> ಸಾಲದ ಹೊರೆ ತಾಳಲಾಗದೆ ಚಿಂಚೊಳಿ ತಾಲ್ಲೂಕಿನ ಇರಗಪಳ್ಳಿ ಗ್ರಾಮದ ರೈತ ಚಂದ್ರಪ್ಪ ತಿಪ್ಪಣ್ಣ (49) ವಿಷಕುಡಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ. ಸುಲೇಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಜಮೀನುಗಳಲ್ಲಿ ಬಿತ್ತಿದ್ದ ತೊಗರಿ, ಉದ್ದು, ಹತ್ತಿ ಮತ್ತು ಹೆಸರು ಬೆಳೆಗಳು ಮಳೆ ನೀರಿನಿಂದ ಹಾನಿಯಾಗಿತ್ತು. ಜತೆಗೆ ಬ್ಯಾಂಕ್ ಸೇರಿ ಖಾಸಗಿಯಾಗಿ ₹7 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಸಾಲಕ್ಕೆ ಹೆದರಿದ್ದ ಚಂದ್ರಪ್ಪ ಅವರು ಕಿಟನಾಶಕ ಕುಡಿದಿದ್ದಾರೆ. ಚಿಂಚೋಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಸಾಲದ ಹೊರೆ ತಾಳಲಾಗದೆ ಚಿಂಚೊಳಿ ತಾಲ್ಲೂಕಿನ ಇರಗಪಳ್ಳಿ ಗ್ರಾಮದ ರೈತ ಚಂದ್ರಪ್ಪ ತಿಪ್ಪಣ್ಣ (49) ವಿಷಕುಡಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ. ಸುಲೇಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಜಮೀನುಗಳಲ್ಲಿ ಬಿತ್ತಿದ್ದ ತೊಗರಿ, ಉದ್ದು, ಹತ್ತಿ ಮತ್ತು ಹೆಸರು ಬೆಳೆಗಳು ಮಳೆ ನೀರಿನಿಂದ ಹಾನಿಯಾಗಿತ್ತು. ಜತೆಗೆ ಬ್ಯಾಂಕ್ ಸೇರಿ ಖಾಸಗಿಯಾಗಿ ₹7 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಸಾಲಕ್ಕೆ ಹೆದರಿದ್ದ ಚಂದ್ರಪ್ಪ ಅವರು ಕಿಟನಾಶಕ ಕುಡಿದಿದ್ದಾರೆ. ಚಿಂಚೋಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>