‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳುಳಿಗೆ ತಿದ್ದುಪಡಿ ತರುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಪ್ರಜೆಗಳಿಗೇ ಬೇಡವಾದ ಕಾಯ್ದೆಗಳ ತಿದ್ದುಪಡಿ ಸರ್ಕಾರಕ್ಕೆ ಏಕೆ ಬೇಕು? ಈ ತಿದ್ದುಪಡಿಗಳಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನ್ಯಾಯವಾಗುತ್ತದೆ. ದೇಸಿ ಸ್ಥಳೀಯ ವರ್ತಕರು ಬೀದಿಪಾಲಾಗುತ್ತಾರೆ. ಆದ್ದರಿಂದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.