<p><strong>ಕಲಬುರ್ಗಿ: </strong>‘ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮುಂಗರಿನ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ರೈತ ವಿಭಾಗದ ಅಧ್ಯಕ್ಷ ಭೀಮರಾಯ ನಾಟೀಕಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.</p>.<p>‘ಒಂದೆಡೆ ಬೆಳೆ ನಾಶ ಇನ್ನೊಂದೆಡೆ ಕೋವಿಡ್ ಸಂಕಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಜೀವನ ಸಾಗಿಸಲು ಬಹಳಷ್ಟು ಕಷ್ಟದಲ್ಲಿದ್ದು, ಅವರಿಗೆ ಸರ್ಕಾರದಿಂದ ₹ 5 ಲಕ್ಷದವರಗೆ ಬಡ್ಡಿರಹಿತವಾಗಿ ಸಾಲ ಒದಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳುಳಿಗೆ ತಿದ್ದುಪಡಿ ತರುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಪ್ರಜೆಗಳಿಗೇ ಬೇಡವಾದ ಕಾಯ್ದೆಗಳ ತಿದ್ದುಪಡಿ ಸರ್ಕಾರಕ್ಕೆ ಏಕೆ ಬೇಕು? ಈ ತಿದ್ದುಪಡಿಗಳಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನ್ಯಾಯವಾಗುತ್ತದೆ. ದೇಸಿ ಸ್ಥಳೀಯ ವರ್ತಕರು ಬೀದಿಪಾಲಾಗುತ್ತಾರೆ. ಆದ್ದರಿಂದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಪಕ್ಷದ ಮುಖಂಡರಾದ ಶಾಮರಾವ್ ಸೂರನ್, ಶಂಕರ ಕಟ್ಟಿ ಸಂಗಾವಿ, ಮೈನೂದ್ದೀನ್ ಶೇಖ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮುಂಗರಿನ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ರೈತ ವಿಭಾಗದ ಅಧ್ಯಕ್ಷ ಭೀಮರಾಯ ನಾಟೀಕಾರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.</p>.<p>‘ಒಂದೆಡೆ ಬೆಳೆ ನಾಶ ಇನ್ನೊಂದೆಡೆ ಕೋವಿಡ್ ಸಂಕಷ್ಟದಿಂದ ರೈತರು ಕಂಗಾಲಾಗಿದ್ದಾರೆ. ಜೀವನ ಸಾಗಿಸಲು ಬಹಳಷ್ಟು ಕಷ್ಟದಲ್ಲಿದ್ದು, ಅವರಿಗೆ ಸರ್ಕಾರದಿಂದ ₹ 5 ಲಕ್ಷದವರಗೆ ಬಡ್ಡಿರಹಿತವಾಗಿ ಸಾಲ ಒದಗಿಸಬೇಕು’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳುಳಿಗೆ ತಿದ್ದುಪಡಿ ತರುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಪ್ರಜೆಗಳಿಗೇ ಬೇಡವಾದ ಕಾಯ್ದೆಗಳ ತಿದ್ದುಪಡಿ ಸರ್ಕಾರಕ್ಕೆ ಏಕೆ ಬೇಕು? ಈ ತಿದ್ದುಪಡಿಗಳಿಂದಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನ್ಯಾಯವಾಗುತ್ತದೆ. ದೇಸಿ ಸ್ಥಳೀಯ ವರ್ತಕರು ಬೀದಿಪಾಲಾಗುತ್ತಾರೆ. ಆದ್ದರಿಂದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಪಕ್ಷದ ಮುಖಂಡರಾದ ಶಾಮರಾವ್ ಸೂರನ್, ಶಂಕರ ಕಟ್ಟಿ ಸಂಗಾವಿ, ಮೈನೂದ್ದೀನ್ ಶೇಖ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>