ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ರಸ್ತೆಯ ಮೂಲಕ ನಿತ್ಯ ನೂರಾರು ರೈತರು, ಕೂಲಿಕಾರ್ಮಿಕರು ಹೋಗುತ್ತಾರೆ. ಮಳೆಗಾಲದಲ್ಲಿ ಈ ರಸ್ತೆಯ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಾಗ ಮುಖ್ಯಮಂತ್ರಿ ಕಚೇರಿಯವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ರವಾನಿಸಿದ್ದಾರೆ. ಆದರೆ, ಅಲ್ಲಿಂದಲೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ರಸ್ತೆಯ ಆಸುಪಾಸಿನಲ್ಲಿ ಸುಮಾರು 2 ಸಾವಿರ ಎಕರೆ ಜಮೀನಿದ್ದು, ಬಿತ್ತನೆ ಮತ್ತು ರಾಶಿ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಮತ್ತಿತರ ವಾಹನಗಳನ್ನು ಕೊಂಡೊಯ್ಯಲು ಸಮಸ್ಯೆಯಾಗುತ್ತಿದೆ. ಈ ಕುರಿತು ಸ್ಥಳೀಯ ಶಾಸಕ ಬಸವರಾಜ ಮತ್ತಿಮಡು ಅವರನ್ನು ಮೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅವರು ಭರವಸೆ ನೀಡಿದ್ದಾರೆಯೇ ಹೊರತು ಇನ್ನೂ ಕಾರ್ಯರೂಪಕ್ಕೆ ತಂದಿಲ್ಲ’ ಎಂದು ದೂರಿದರು.