ರೈತರ ನೀರಾವರಿ ಪಂಪ್ಸೆಟ್ಗಳು, ಬಡವರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳಲ್ಲಿ ಉಚಿತ ವಿದ್ಯುತ್ ನೀಡುವುದನ್ನು ನಿಲ್ಲಿಸಲು ಕೇಂದ್ರ ಸರ್ಕಾರ ‘ವಿದ್ಯುತ್ ಕಾಯ್ದೆ–2003’ಕ್ಕೆ ತಿದ್ದುಪಡಿ ತರುತ್ತಿದೆ. ರಾಜ್ಯ ಸರ್ಕಾರ ಇದಕ್ಕೆ ಆಸ್ಪದ ಕೊಡಬಾರದು. ಅಗತ್ಯ ವಸ್ತುಗಳ ಕಾಯ್ದೆ–2020 ಮೂಲಕ ಉಳ್ಳವರು ಅಕ್ರಮ ದಾಸ್ತಾನು ಮಾಡಲು ಅನುಕೂಲ ಮಾಡಲಾಗುತ್ತಿದೆ. ಹಾಗಾಗಿ, ಈ ಮೂರೂ ನಿರ್ಧಾರಗಳಿಂದ ರಾಜ್ಯ ಸರ್ಕಾರ ದೂರ ಸರಿಯಬೇಕು ಎಂದು ಆಗ್ರಹಿಸಿದರು.