ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಹಾರದ ಭರವಸೆ; ಪ್ರತಿಭಟನೆ ವಾಪಸ್

ಶಿವಪುರ: ರೈತರ ಪ್ರತಿಭಟನಾ ನಿರತ ಸ್ಥಳಕ್ಕೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಭೇಟಿ
Last Updated 16 ಡಿಸೆಂಬರ್ 2019, 10:45 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಶಿವಪುರ ಗ್ರಾಮದ ಸಮೀಪದ ಸಂಗಮ್‌ ಬ್ರೀಡ್ಜ್‌ನಲ್ಲಿ
ಶಿವಪುರ, ಗೋನಾಲ ಗ್ರಾಮಗಳ ರೈತರು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.

ತಾಲ್ಲೂಕಿನ ಶಿವಪುರದ ಬಳಿ ಆರ್‌ಟಿಪಿಸ್‌ ಘಟಕ ಸ್ಥಾಪಿಸುವ ಸಂಬಂಧ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ನಿರ್ಮಿಸಲಾಗಿದೆ. ಇದರ ಗೇಟ್‌ಗಳು ಬಂದ್‌ ಮಾಡಿದ ಕಾರಣ ಕಳೆದ ಆಗಸ್ಟ್‌ನಲ್ಲಿ ಪ್ರವಾಹ ಉಂಟಾಗಿ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿತ್ತು.

ಬೆಳೆ ಹಾನಿಯಾದ ಜಮೀನುಗಳ ಮಾಲೀಕರಿಗೆ ಪರಿಹಾರ ನೀಡುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಎಚ್ಚೆತ್ತುಕೊಂಡ ಶಾಸಕರು ಸ್ಥಳಕ್ಕೆ ಭೇಟಿ ನೀಡಿದರು.

‘ಪ್ರವಾಹದಿಂದ ಎಷ್ಟು ಬೆಳೆ ನಾಶವಾಗಿದೆ ಎಂಬುದರ ಕುರಿತು ಅಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಆರ್‌ಟಿಪಿಎಸ್ ಅಧಿಕಾರಿ, ತಹಶೀಲ್ದಾರ್‌ ಜೊತೆ ಚರ್ಚೆ ನಡೆಸುತ್ತೇನೆ’ ರೈತರು ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು’ ಎಂದು ಪ್ರತಿಭಟನಾ ನಿರತ ರೈತರಿಗೆ ಶಾಸಕರು ಭರವಸೆ ನೀಡಿದರು. ಬಳಿಕ ರೈತರು ಶಾಸಕರ ನೀಡಿದ ಭರವಸೆಯಂತೆ ಪ್ರತಿಭಟನೆ ವಾಪಸ್‌ ಪಡೆದರು.

ತಹಶೀಲ್ದಾರ್‌ ಸಂತೋಷರಾಣಿ, ಶ್ರೀನಿವಾಸಗೌಡ ಚೆನ್ನೂರ, ಸಿದ್ದಣ್ಣಗೌಡ ಕಾಡಂನೋರ್‌, ಬಸವರಾಜ ಮಾಲಿ ಪಾಟೀಲ, ಶ್ರೀನಿವಾಸ ಕಲಾಲ್‌, ರಾಜಪ್ಪಗೌಡ ಮಾಲಿ ಪಾಟೀಲ, ಗುರುರಾಜ ಸಾಹುಕಾರ, ಹಿರಣ್ಣ ಕಲಾಲ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT