ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ: ರೈತ ಆತ್ಮಹತ್ಯೆ

Last Updated 30 ಅಕ್ಟೋಬರ್ 2018, 11:13 IST
ಅಕ್ಷರ ಗಾತ್ರ

ಕಲಬುರ್ಗಿ: ಸಾಲಬಾಧೆಯಿಂದ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.

ಸೇಡಂ ತಾಲ್ಲೂಕು ನಾಚವಾರದ ವಿಶ್ವನಾಥರೆಡ್ಡಿ ಸಿದ್ದರಾಮರೆಡ್ಡಿ ನಾಚವಾರ (35) ಮೃತಪಟ್ಟವರು. ಇವರು ಅ.28ರಂದು ಕ್ರಿಮಿನಾಶಕ ಸೇವಿಸಿದ್ದರು.

‘ವಿಶ್ವನಾಥರೆಡ್ಡಿ ಅವರಿಗೆ 1 ಎಕರೆ 5 ಗುಂಟೆ ಜಮೀನಿದ್ದು, ಬ್ಯಾಂಕ್ ಹಾಗೂ ಖಾಸಗಿಯಾಗಿ ಸಾಲ ಮಾಡಿದ್ದರು. ಸಾಲ ಪಾವತಿಸುವ ದಾರಿ ಕಾಣದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತರಿಗೆ ಪತ್ನಿ, ನಾಲ್ಕು ಜನ ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT