<p><strong>ಕಲಬುರಗಿ:</strong> ನಗರದ ರಾಜಾಪುರ ಪ್ರದೇಶದ ರಾಘವೇಂದ್ರ ಕಾಲೊನಿಯ ಮನೆಯೊಂದರ ಕೀಲಿ ಮುರಿದ ಕಳ್ಳರು 92 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ ಆಭರಣ ಹಾಗೂ ₹ 2.50 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.</p>.<p>ಚಂದ್ರಶೇಖರ ಮರಗೋಳ (71) ಚಿನ್ನಾಭರಣ ಕಳೆದುಕೊಂಡವರು.</p>.<p>‘ಫೆ.17ರಂದು ಮಧ್ಯಾಹ್ನದ ಹೊತ್ತಿಗೆ ಕೋರವಾರ ಅಣಿವೀರಭದ್ರೇಶ್ವರ ದೇವರ ಜಾತ್ರೆಗೆ ಪತ್ನಿ ಸಮೇತ ಹೋಗಿದ್ದೆ. ರಾತ್ರಿ ಅಗ್ಗಿ ತುಳಿದು ಅಲ್ಲಿ ವಾಸ್ತವ್ಯ ಹೂಡಿದ್ದೆವು. ಫೆ.18ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಗೆ ಬಂದಾಗ ಬಾಗಿಲಿಗೆ ಹಾಕಿದ್ದ ಕೀಲಿ ಮುರಿದಿತ್ತು’ ಎಂದು ದೂರಿನಲ್ಲಿ ಚಂದ್ರಶೇಖರ ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<p><strong>₹ 3.53 ಲಕ್ಷ ಮೌಲ್ಯ ಪಡಿತರ ಅಕ್ಕಿ ಜಪ್ತಿ</strong></p>.<p>ಕಲಬುರಗಿ: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದ ಲಾರಿಯೊಂದರ ಮೇಲೆ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ, 10 ಟನ್ ಪಡಿತರ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಅದರ ಅಂದಾಜು ಮೌಲ್ಯ ₹ 3.53 ಲಕ್ಷ. ಜೊತೆಗೆ ₹ 10 ಲಕ್ಷ ಮೌಲ್ಯದ ವಾಹನವನ್ನೂ ಜಪ್ತಿಮಾಡಿಕೊಂಡಿದ್ದಾರೆ.</p>.<p>ನಗರದ ಆಳಂದ ರಸ್ತೆಯ ವಿಶ್ವರಾಧ್ಯ ಗುಡಿ ಸಮೀಪದ ದಾಳಿ ವೇಳೆ ಅಕ್ಕಿ ಮೂಟೆಗಳನ್ನು ತುಂಬಿದ್ದ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.</p>.<p>ಕಲಬುರಗಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಕುರಿತು ಕಲಬುರಗಿ ಸಬರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ರಾಜಾಪುರ ಪ್ರದೇಶದ ರಾಘವೇಂದ್ರ ಕಾಲೊನಿಯ ಮನೆಯೊಂದರ ಕೀಲಿ ಮುರಿದ ಕಳ್ಳರು 92 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ ಆಭರಣ ಹಾಗೂ ₹ 2.50 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ.</p>.<p>ಚಂದ್ರಶೇಖರ ಮರಗೋಳ (71) ಚಿನ್ನಾಭರಣ ಕಳೆದುಕೊಂಡವರು.</p>.<p>‘ಫೆ.17ರಂದು ಮಧ್ಯಾಹ್ನದ ಹೊತ್ತಿಗೆ ಕೋರವಾರ ಅಣಿವೀರಭದ್ರೇಶ್ವರ ದೇವರ ಜಾತ್ರೆಗೆ ಪತ್ನಿ ಸಮೇತ ಹೋಗಿದ್ದೆ. ರಾತ್ರಿ ಅಗ್ಗಿ ತುಳಿದು ಅಲ್ಲಿ ವಾಸ್ತವ್ಯ ಹೂಡಿದ್ದೆವು. ಫೆ.18ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಗೆ ಬಂದಾಗ ಬಾಗಿಲಿಗೆ ಹಾಕಿದ್ದ ಕೀಲಿ ಮುರಿದಿತ್ತು’ ಎಂದು ದೂರಿನಲ್ಲಿ ಚಂದ್ರಶೇಖರ ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<p><strong>₹ 3.53 ಲಕ್ಷ ಮೌಲ್ಯ ಪಡಿತರ ಅಕ್ಕಿ ಜಪ್ತಿ</strong></p>.<p>ಕಲಬುರಗಿ: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದ ಲಾರಿಯೊಂದರ ಮೇಲೆ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ, 10 ಟನ್ ಪಡಿತರ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಅದರ ಅಂದಾಜು ಮೌಲ್ಯ ₹ 3.53 ಲಕ್ಷ. ಜೊತೆಗೆ ₹ 10 ಲಕ್ಷ ಮೌಲ್ಯದ ವಾಹನವನ್ನೂ ಜಪ್ತಿಮಾಡಿಕೊಂಡಿದ್ದಾರೆ.</p>.<p>ನಗರದ ಆಳಂದ ರಸ್ತೆಯ ವಿಶ್ವರಾಧ್ಯ ಗುಡಿ ಸಮೀಪದ ದಾಳಿ ವೇಳೆ ಅಕ್ಕಿ ಮೂಟೆಗಳನ್ನು ತುಂಬಿದ್ದ ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.</p>.<p>ಕಲಬುರಗಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಕುರಿತು ಕಲಬುರಗಿ ಸಬರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>