ಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಮುಗಳನಾಗಾಂವಿ ಹಿರೇಮಠ ಸಂಸ್ಥಾನದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಚೌದಾಪುರಿ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯರು, ಸಿದ್ಧಮಲ್ಲ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಡಾ.ಉಮೇಶ ಜಾಧವ, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕ್ರಪ್ಪ ಸಾಹುಕಾರ, ಕೆಕೆಆರ್ಟಿಸಿ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕರಾದ ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ್, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಬಾಬುರಾವ ಚಿಂಚನಸೂರ,ಸುನೀಲ ವಲ್ಯಾಪುರ, ಬಿ.ಜಿ. ಪಾಟೀಲ ಇತರರು ಭಾಗವಹಿಸಲಿದ್ದಾರೆ ಎಂದರು.