<p><strong>ಕಲಬುರಗಿ</strong>: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿನಿಯೊಬ್ಬರು ತಮ್ಮ ಜನ್ಮದಿನದಂದೇ ಹಾಸ್ಟೆಲ್ ಕೊಠಡಿಯ ಫ್ಯಾನ್ಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಬಿಎಸ್ಸಿ ಭೂಗರ್ಭವಿಜ್ಞಾನ ಪದವಿ ಅಂತಿಮ ವರ್ಷದ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ, ಒಡಿಶಾ ಮೂಲದ ಜಯಶ್ರೀ ನಾಯಕ್ (21) ಮೃತರು. ಅವರು ವಿಶ್ವವಿದ್ಯಾಲಯದ ಯಮುನಾ ಹಾಸ್ಟೆಲ್ನ ಕೊಠಡಿ ಸಂಖ್ಯೆ ‘ಎ1’ರಲ್ಲಿ ನೆಲೆಸಿದ್ದರು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಪ್ರಕಾಶ ಯಾತನೂರ, ನಿಂಬರ್ಗಾ ಠಾಣೆ ಪಿಎಸ್ಐ ಇಂದುಮತಿ ಪಾಟೀಲ ಹಾಗೂ ನರೋಣಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p><p>‘ಸಹ ವಿದ್ಯಾರ್ಥಿಗಳು ಕರೆದರೂ ಜಯಶ್ರೀ ಬುಧವಾರ ತರಗತಿಗೆ ಹಾಜರಾಗಿರಲಿಲ್ಲ. ವಿದ್ಯಾರ್ಥಿಗಳು ಮಧ್ಯಾಹ್ನ ಹೊತ್ತಿಗೆ ತರಗತಿಗಳಿಂದ ಊಟಕ್ಕೆ ಮರಳಿದಾಗ ಆತ್ಮಹತ್ಯೆ ಸಂಗತಿ ಬೆಳಕಿಗೆ ಬಂದಿದೆ’ ಎಂದು ಮೂಲಗಳು ಹೇಳಿವೆ.</p><p>‘ಮೃತ ವಿದ್ಯಾರ್ಥಿನಿ ಪೋಷಕರು ಓಡಿಶಾದಿಂದ ಹೊರಟ್ಟಿದ್ದು, ಅವರು ನೀಡುವ ದೂರು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗುವುದು. ಸದ್ಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ’ ಎಂದು ಎಸ್.ಪಿ ಅಡ್ಡೂರು ಶ್ರೀನಿವಾಸುಲು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿನಿಯೊಬ್ಬರು ತಮ್ಮ ಜನ್ಮದಿನದಂದೇ ಹಾಸ್ಟೆಲ್ ಕೊಠಡಿಯ ಫ್ಯಾನ್ಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಬಿಎಸ್ಸಿ ಭೂಗರ್ಭವಿಜ್ಞಾನ ಪದವಿ ಅಂತಿಮ ವರ್ಷದ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ, ಒಡಿಶಾ ಮೂಲದ ಜಯಶ್ರೀ ನಾಯಕ್ (21) ಮೃತರು. ಅವರು ವಿಶ್ವವಿದ್ಯಾಲಯದ ಯಮುನಾ ಹಾಸ್ಟೆಲ್ನ ಕೊಠಡಿ ಸಂಖ್ಯೆ ‘ಎ1’ರಲ್ಲಿ ನೆಲೆಸಿದ್ದರು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಆಳಂದ ಡಿವೈಎಸ್ಪಿ ತಮ್ಮರಾಯ ಪಾಟೀಲ, ಸಿಪಿಐ ಪ್ರಕಾಶ ಯಾತನೂರ, ನಿಂಬರ್ಗಾ ಠಾಣೆ ಪಿಎಸ್ಐ ಇಂದುಮತಿ ಪಾಟೀಲ ಹಾಗೂ ನರೋಣಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p><p>‘ಸಹ ವಿದ್ಯಾರ್ಥಿಗಳು ಕರೆದರೂ ಜಯಶ್ರೀ ಬುಧವಾರ ತರಗತಿಗೆ ಹಾಜರಾಗಿರಲಿಲ್ಲ. ವಿದ್ಯಾರ್ಥಿಗಳು ಮಧ್ಯಾಹ್ನ ಹೊತ್ತಿಗೆ ತರಗತಿಗಳಿಂದ ಊಟಕ್ಕೆ ಮರಳಿದಾಗ ಆತ್ಮಹತ್ಯೆ ಸಂಗತಿ ಬೆಳಕಿಗೆ ಬಂದಿದೆ’ ಎಂದು ಮೂಲಗಳು ಹೇಳಿವೆ.</p><p>‘ಮೃತ ವಿದ್ಯಾರ್ಥಿನಿ ಪೋಷಕರು ಓಡಿಶಾದಿಂದ ಹೊರಟ್ಟಿದ್ದು, ಅವರು ನೀಡುವ ದೂರು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗುವುದು. ಸದ್ಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ’ ಎಂದು ಎಸ್.ಪಿ ಅಡ್ಡೂರು ಶ್ರೀನಿವಾಸುಲು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>