<p>ಕಲಬುರಗಿ: ‘ನಾಯಕ ತಳವಾರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು. ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆ ನಡೆಸಿ ಹೋರಾಟ ಮಾಡಲಾಗುವುದು’ ಎಂದು ರಾಜ್ಯ ಎಸ್.ಸಿ. ಎಸ್.ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮರೆಪ್ಪ ನಾಯಕ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2020ರಲ್ಲಿ ಪರಿವಾರ ಮತ್ತು ತಳವಾರ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸೌಲಭ್ಯ ವಿಸ್ತರಣೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಅದರಂತೆ ರಾಜ್ಯದಲ್ಲಿಯೂ ನಾಯಕ ಜಾತಿಯ ತಳವಾರ ಮತ್ತು ಪರಿವಾರ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಲಾಗಿದೆ. ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರಿಗೆ ಪ್ರಮಾಣಪತ್ರ ನೀಡಲಾಗಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಹಿಂದುಳಿದ ವರ್ಗದ ಪಟ್ಟಿಯ ಕ್ರಮ ಸಂಖ್ಯೆ 88ಎಚ್ ತಳವಾರ ಜನಾಂಗದವರು ಅಂಬಿಗ, ಗಂಗಾಮತಸ್ಥ, ಕಬ್ಬಲಿಗ ಜಾತಿಗೆ ಸೇರಿದ್ದಾರೆ. ಇವರು ನಾಯಕ ತಳವಾರ ಜಾತಿಗೆ ಸೇರಿಲ್ಲ. ಇವರಿಗೆ ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ಪ್ರಮಾಣ ಪತ್ರ ನೀಡುತ್ತಿರುವುದು ಸರಿಯಲ್ಲ’ ಎಂದರು.</p>.<p>‘ಈ ಕೂಡಲೇ ಜಿಲ್ಲೆಯಲ್ಲಿ ನೀಡಿದ ಎಸ್.ಟಿ. ನಾಯಕ, ನಾಯ್ಕಡ್ ತಳವಾರ, ಪರಿವಾರಕ್ಕೆ ನೀಡಿದ ಜಾತಿ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರಗಳನ್ನು ರದ್ದು ಮಾಡಬೇಕು. ಜಾತಿ ಪ್ರಮಾಣ ಪತ್ರ ನೀಡಿದ ತಹಶೀಲ್ದಾರ್ ಅವರನ್ನು ವಜಾಮಾಡಿ ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗೌಡಪ್ಪಗೌಡ ಆಲ್ದಾಳ, ಶರಣು ಸುಬೇದಾರ, ಸಂದೀಪ ಭರಣಿ, ಬಾಬುರಾವ ಬಡಿಗೇರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ನಾಯಕ ತಳವಾರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು. ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆ ನಡೆಸಿ ಹೋರಾಟ ಮಾಡಲಾಗುವುದು’ ಎಂದು ರಾಜ್ಯ ಎಸ್.ಸಿ. ಎಸ್.ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮರೆಪ್ಪ ನಾಯಕ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2020ರಲ್ಲಿ ಪರಿವಾರ ಮತ್ತು ತಳವಾರ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸೌಲಭ್ಯ ವಿಸ್ತರಣೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಅದರಂತೆ ರಾಜ್ಯದಲ್ಲಿಯೂ ನಾಯಕ ಜಾತಿಯ ತಳವಾರ ಮತ್ತು ಪರಿವಾರ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಲಾಗಿದೆ. ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರಿಗೆ ಪ್ರಮಾಣಪತ್ರ ನೀಡಲಾಗಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಹಿಂದುಳಿದ ವರ್ಗದ ಪಟ್ಟಿಯ ಕ್ರಮ ಸಂಖ್ಯೆ 88ಎಚ್ ತಳವಾರ ಜನಾಂಗದವರು ಅಂಬಿಗ, ಗಂಗಾಮತಸ್ಥ, ಕಬ್ಬಲಿಗ ಜಾತಿಗೆ ಸೇರಿದ್ದಾರೆ. ಇವರು ನಾಯಕ ತಳವಾರ ಜಾತಿಗೆ ಸೇರಿಲ್ಲ. ಇವರಿಗೆ ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ಪ್ರಮಾಣ ಪತ್ರ ನೀಡುತ್ತಿರುವುದು ಸರಿಯಲ್ಲ’ ಎಂದರು.</p>.<p>‘ಈ ಕೂಡಲೇ ಜಿಲ್ಲೆಯಲ್ಲಿ ನೀಡಿದ ಎಸ್.ಟಿ. ನಾಯಕ, ನಾಯ್ಕಡ್ ತಳವಾರ, ಪರಿವಾರಕ್ಕೆ ನೀಡಿದ ಜಾತಿ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರಗಳನ್ನು ರದ್ದು ಮಾಡಬೇಕು. ಜಾತಿ ಪ್ರಮಾಣ ಪತ್ರ ನೀಡಿದ ತಹಶೀಲ್ದಾರ್ ಅವರನ್ನು ವಜಾಮಾಡಿ ಕ್ರಿಮಿನಲ್ ಕೇಸ್ ದಾಖಲು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗೌಡಪ್ಪಗೌಡ ಆಲ್ದಾಳ, ಶರಣು ಸುಬೇದಾರ, ಸಂದೀಪ ಭರಣಿ, ಬಾಬುರಾವ ಬಡಿಗೇರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>