<p><strong>ಕಲಬುರಗಿ:</strong> ಮತೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಜೇವರ್ಗಿ ತಾಲ್ಲೂಕಿನ ಆಂದೋಲಾದ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಆಳಂದ ತಾಲ್ಲೂಕಿನ ನರೋಣಾ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.</p>.<p>ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಮುಸ್ಲಿಮರು ಅನಧಿಕೃತವಾಗಿ ಸಮಾಧಿ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.</p>.<p>ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಆಂದೋಲಾ ಸ್ವಾಮೀಜಿ, ‘ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಮುಸ್ಲಿಮರು ಯಾವುದೇ ಅನುಮತಿ ಇಲ್ಲದೇ, 10ರಿಂದ 15 ಅಡಿ ವಿಸ್ತಾರದ ಒಂದು ಸಮಾಧಿ ನಿರ್ಮಿಸಿದ್ದಾರೆ. ಅಲ್ಲಿ ನಮಾಜ್ ಮಾಡುತ್ತಿದ್ದಾರೆಂಬ ಮಾಹಿತಿ ಬಂದಿದೆ. ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಆ ಸಮಾಧಿ ನೆಲಸಮಗೊಳಿಸಬೇಕು. ಇಲ್ಲದಿದ್ದರೆ, ಆಗಸ್ಟ್ 10ರಂದು ಶ್ರೀರಾಮ ಸೇನೆಯಿಂದ ಆ ಅನಧಿಕೃತ ಸಮಾಧಿ ನೆಲಸಮಗೊಳಿಸಲಾಗುವುದು’ ಎಂದು ತಿಳಿಸಿದ್ದರು. ಆದರೆ, ಸ್ಥಳಕ್ಕೆ ನಮ್ಮ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದಾಗ ಅದು ಶತಮಾನಗಳಷ್ಟು ಹಿಂದಿನ ಸಮಾಧಿಯಾಗಿದ್ದು, ಹೊಸ ಸಮಾಧಿ ನಿರ್ಮಾಣ ಮಾಡಿರುವುದು ಕಂಡು ಬಂದಿಲ್ಲ’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p>.<p>‘ಆಂದೋಲಾ ಸ್ವಾಮೀಜಿ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ಎರಡು ಧರ್ಮಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಆಧಾರರಹಿತ ಹೇಳಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಮತೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಜೇವರ್ಗಿ ತಾಲ್ಲೂಕಿನ ಆಂದೋಲಾದ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಆಳಂದ ತಾಲ್ಲೂಕಿನ ನರೋಣಾ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.</p>.<p>ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಮುಸ್ಲಿಮರು ಅನಧಿಕೃತವಾಗಿ ಸಮಾಧಿ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.</p>.<p>ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಆಂದೋಲಾ ಸ್ವಾಮೀಜಿ, ‘ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಮುಸ್ಲಿಮರು ಯಾವುದೇ ಅನುಮತಿ ಇಲ್ಲದೇ, 10ರಿಂದ 15 ಅಡಿ ವಿಸ್ತಾರದ ಒಂದು ಸಮಾಧಿ ನಿರ್ಮಿಸಿದ್ದಾರೆ. ಅಲ್ಲಿ ನಮಾಜ್ ಮಾಡುತ್ತಿದ್ದಾರೆಂಬ ಮಾಹಿತಿ ಬಂದಿದೆ. ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಆ ಸಮಾಧಿ ನೆಲಸಮಗೊಳಿಸಬೇಕು. ಇಲ್ಲದಿದ್ದರೆ, ಆಗಸ್ಟ್ 10ರಂದು ಶ್ರೀರಾಮ ಸೇನೆಯಿಂದ ಆ ಅನಧಿಕೃತ ಸಮಾಧಿ ನೆಲಸಮಗೊಳಿಸಲಾಗುವುದು’ ಎಂದು ತಿಳಿಸಿದ್ದರು. ಆದರೆ, ಸ್ಥಳಕ್ಕೆ ನಮ್ಮ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದಾಗ ಅದು ಶತಮಾನಗಳಷ್ಟು ಹಿಂದಿನ ಸಮಾಧಿಯಾಗಿದ್ದು, ಹೊಸ ಸಮಾಧಿ ನಿರ್ಮಾಣ ಮಾಡಿರುವುದು ಕಂಡು ಬಂದಿಲ್ಲ’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p>.<p>‘ಆಂದೋಲಾ ಸ್ವಾಮೀಜಿ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ಎರಡು ಧರ್ಮಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಿ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಆಧಾರರಹಿತ ಹೇಳಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>