‘ಶಾಂತಪ್ಪ ಸೋಮಾ 2009–10ನೇ ಸಾಲಿನಲ್ಲಿ ಶಿಕ್ಷಣ ವಿಭಾಗದಲ್ಲಿ ಪಿಎಚ್.ಡಿ. ಸಂಶೋಧನೆ ನಡೆಸಲು ನೋಂದಣಿ ಮಾಡಿಕೊಂಡಿದ್ದರು. ಶಾಂತಪ್ಪ ಪಿಎಚ್.ಡಿ. ಅರ್ಜಿ ಶುಲ್ಕ ಪಾವತಿಸದಿದ್ದರೂ, ಎಂ.ಫಿಲ್, ನೆಟ್ ಮಾಡದವರಿಗಾಗಿ ನಡೆಸುವ ಪಿಎಚ್.ಡಿ. ಪ್ರವೇಶ ಪರೀಕ್ಷೆಗೆ ಹಾಜರಾಗದಿದ್ದರೂ ಮೆರಿಟ್ ಪಟ್ಟಿಯಲ್ಲಿ ಅರೆಕಾಲಿಕ ಕೋಟಾದಡಿ ವಿಭಾಗದ ಮುಖ್ಯಸ್ಥೆ ಪ್ರೊ. ಸುರೇಖಾ ಕ್ಷೀರಸಾಗರ ಅವರು ಪ್ರವೇಶ ನೀಡಿದ್ದಾರೆ. ಈ ಪ್ರಕರಣವನ್ನು ಕುಲಸಚಿವರ ಗಮನಕ್ಕೆ ತಂದರೂ ಅವರು ಸೂಕ್ತ ಕ್ರಮ ಕೈಗೊಂಡಿಲ್ಲ. ಅಲ್ಲದೇ, ಶಾಂತಪ್ಪ ಅವರ ಪ್ರವೇಶಾತಿ ವಿವರ ಕೇಳಿದಾಗ ಶುಲ್ಕದ ವಿವರಗಳು ಕಚೇರಿ ಕಡತದಲ್ಲಿ ಲಭ್ಯವಿರುವುದಿಲ್ಲ ಎಂದು ಹೇಳಿದ್ದಾರೆ’ ಎಂದು ದೂರಿನಲ್ಲಿಉಲ್ಲೇಖಿಸಲಾಗಿದೆ.