ಚಿತ್ತಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಕರದಾಳ ಗ್ರಾಮದ ವಸತಿ ನಿಲಯದಲ್ಲಿ ಭಾಗ್ಯಶ್ರೀ ಸಾಯಬಣ್ಣಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ನಿಲಯದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವಾರ್ಡನ್ ರೇಣುಕಾ ಮೂಲಿಮಠ, ಅಧೀಕ್ಷಕ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.