ಕಲಬುರ್ಗಿ: ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಲಂಚದ ಆರೋಪ ಮಾಡಿದ್ದಕ್ಕಾಗಿ ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಿಜೆಪಿ ಮುಖಂಡರಾದ ಪಾಲಿಕೆಯ ಮಾಜಿ ಸದಸ್ಯರಾದ ಪ್ರಭು ಹಾದಿಮನಿ, ವಿಶಾಲ ದರ್ಗಿ ಹಾಗೂ ಮುಖಂಡ ಚಂದ್ರಕಾಂತ ಸಂತಪುರ ವಿರುದ್ಧ ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.