<p><strong>ಕಲಬುರಗಿ</strong>: ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಕೆನರಾ ಬ್ಯಾಂಕ್ಗೆ ಸೇರಿದ ಹಳೆಯ ಜನರೇಟರ್ನಿಂದ ಭಾನುವಾರ ಸಂಜೆ ಹೊತ್ತಿದ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ರಮೇಶ್ ಪವಾರ (55) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಬ್ಯಾಂಕ್ನ ಸಿಬ್ಬಂದಿ ಎಲ್ಲರೂ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಬ್ಯಾಂಕ್ನ ಹಿಂಬದಿಯ ಕಟ್ಟಡದಲ್ಲಿ ಜನರೇಟರ್ ಇದ್ದು, ಅದರಿಂದ ಹೊಗೆಯ ವಾಸನೆ ಬರುತ್ತಿರುವುದನ್ನು ಕಟ್ಟಡದ ಎದುರಿಗೆ ಮಣ್ಣಿನ ಪಾತ್ರೆಗಳನ್ನು ಮಾರುತ್ತಿದ್ದ ವ್ಯಾಪಾರಿ ಗಮನಿಸಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.</p>.<p>ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆ ವಿದ್ಯುತ್ ಸ್ಪರ್ಶ ಶಾಕ್ ತಗುಲಿ ಹೊರಗೆ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಂಚಾರ ಠಾಣೆಯ ಪೊಲೀಸರು ಆಟೊದಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜನರೇಟರ್ನಿಂದ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಹೊರಭಾಗದಲ್ಲೂ ವ್ಯಾಪಿಸಿತು. ಕಟ್ಟಡದ ಎದುರಿಗೆ ಇದ್ದ ಗಿಡದ ರೆಂಬೆಗಳಿಗೂ ಆವರಿಸಿಕೊಂಡಿತು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜೆಸ್ಕಾಂ ಸಿಬ್ಬಂದಿ ಕೂಡಲೇ ಸೂಪರ್ ಮಾರ್ಕೆಟ್ನ ಆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು. ಪರಿಸ್ಥಿತಿ ತಹಬಂದಿಗೆ ಬಂದ ಬಳಿಕ ವಿದ್ಯುತ್ ಪೂರೈಕೆ ಪುನರಾರಂಭಿಸಲಾಯಿತು’ ಎಂದು ಅವರು ತಿಳಿಸಿದ್ದಾರೆ.</p>.<p>‘ರಮೇಶ್ ಪವಾರ್ ಅವರಿಗೆ ರಕ್ತದೊತ್ತಡದಲ್ಲಿ ಹೆಚ್ಚು ಕಡಿಮೆಯಾಗಿದೆ ಎಂದು ಅವರ ಜೊತೆಯಲ್ಲಿದ್ದ ಸಿಬ್ಬಂದಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ನಿಜವಾದ ಕಾರಣ ಗೊತ್ತಾಗಲಿದೆ’ ಎಂದು ಡಿಸಿಪಿ ಅಡ್ಡೂರು ಶ್ರೀನಿವಾಸಲು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಕೆನರಾ ಬ್ಯಾಂಕ್ಗೆ ಸೇರಿದ ಹಳೆಯ ಜನರೇಟರ್ನಿಂದ ಭಾನುವಾರ ಸಂಜೆ ಹೊತ್ತಿದ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ರಮೇಶ್ ಪವಾರ (55) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಬ್ಯಾಂಕ್ನ ಸಿಬ್ಬಂದಿ ಎಲ್ಲರೂ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ್ದರು. ಬ್ಯಾಂಕ್ನ ಹಿಂಬದಿಯ ಕಟ್ಟಡದಲ್ಲಿ ಜನರೇಟರ್ ಇದ್ದು, ಅದರಿಂದ ಹೊಗೆಯ ವಾಸನೆ ಬರುತ್ತಿರುವುದನ್ನು ಕಟ್ಟಡದ ಎದುರಿಗೆ ಮಣ್ಣಿನ ಪಾತ್ರೆಗಳನ್ನು ಮಾರುತ್ತಿದ್ದ ವ್ಯಾಪಾರಿ ಗಮನಿಸಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.</p>.<p>ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆ ವಿದ್ಯುತ್ ಸ್ಪರ್ಶ ಶಾಕ್ ತಗುಲಿ ಹೊರಗೆ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಂಚಾರ ಠಾಣೆಯ ಪೊಲೀಸರು ಆಟೊದಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜನರೇಟರ್ನಿಂದ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಹೊರಭಾಗದಲ್ಲೂ ವ್ಯಾಪಿಸಿತು. ಕಟ್ಟಡದ ಎದುರಿಗೆ ಇದ್ದ ಗಿಡದ ರೆಂಬೆಗಳಿಗೂ ಆವರಿಸಿಕೊಂಡಿತು. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜೆಸ್ಕಾಂ ಸಿಬ್ಬಂದಿ ಕೂಡಲೇ ಸೂಪರ್ ಮಾರ್ಕೆಟ್ನ ಆ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು. ಪರಿಸ್ಥಿತಿ ತಹಬಂದಿಗೆ ಬಂದ ಬಳಿಕ ವಿದ್ಯುತ್ ಪೂರೈಕೆ ಪುನರಾರಂಭಿಸಲಾಯಿತು’ ಎಂದು ಅವರು ತಿಳಿಸಿದ್ದಾರೆ.</p>.<p>‘ರಮೇಶ್ ಪವಾರ್ ಅವರಿಗೆ ರಕ್ತದೊತ್ತಡದಲ್ಲಿ ಹೆಚ್ಚು ಕಡಿಮೆಯಾಗಿದೆ ಎಂದು ಅವರ ಜೊತೆಯಲ್ಲಿದ್ದ ಸಿಬ್ಬಂದಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ನಿಜವಾದ ಕಾರಣ ಗೊತ್ತಾಗಲಿದೆ’ ಎಂದು ಡಿಸಿಪಿ ಅಡ್ಡೂರು ಶ್ರೀನಿವಾಸಲು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>