ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ದಿನಸಿ ಅಂಗಡಿಗೆ ಬೆಂಕಿ: ₹ 25 ಲಕ್ಷ ಮೌಲ್ಯದ ವಸ್ತುಗಳು ನಾಶ

Last Updated 19 ಏಪ್ರಿಲ್ 2022, 5:53 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ ಜಿಲ್ಲೆ): ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿರುವ ದಿನಸಿ ಅಂಗಡಿಯಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಬಹುಪಾಲು ವಸ್ತುಗಳು ಸುಟ್ಟುಹೋಗಿವೆ.

ಮಹಮ್ಮದ್ ಅಮ್ಜದ್ ಪೆದ್ದಮುಲ್ ಹುಸೇನ್ ಅವರಿಗೆ ಸೇರಿದ ಅಂಗಡಿ ಬೆಂಕಿಗಾಹುತಿಯಾಗಿದೆ. ಇವರು ಬಾಡಿಗೆ ಕಟ್ಟಡದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಅಂಗಡಿಯಲ್ಲಿದ್ದ ₹25 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು ಅಂದಾಜಿಸಲಾಗಿದೆ.

ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಅಷ್ಟರೊಳಗೆ ಅಂಗಡಿ ಪೂರ್ಣ ಸುಟ್ಟಿತ್ತು. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿರಬಹುದೆಂದು ಚಿಂಚೋಳಿ ಠಾಣೆ ಪೊಲೀಸರು ಅಂದಾಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT