ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ನಂದಿಸುತ್ತಿದ್ದ ವೇಳೆ ಅಗ್ನಿಶಾಮಕ ಸಿಬ್ಬಂದಿ ಸಾವು

Last Updated 26 ಡಿಸೆಂಬರ್ 2021, 19:50 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಸೂಪರ್‌ ಮಾರ್ಕೆಟ್‌ನಲ್ಲಿರುವ ಕೆನರಾ ಬ್ಯಾಂಕ್‌ಗೆ ಸೇರಿದ ಹಳೆಯ ಜನರೇಟರ್‌ನಿಂದ ಭಾನುವಾರ ಸಂಜೆ ಹೊತ್ತಿದ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ರಮೇಶ್‌ ಪವಾರ (55) ಎಂಬುವರು ಮೃತಪಟ್ಟಿದ್ದಾರೆ.

‘ಬ್ಯಾಂಕ್‌ನ ಹಿಂಬದಿಯ ಕಟ್ಟಡದಲ್ಲಿ ಜನರೇಟರ್ ಇದ್ದು, ಅದರಿಂದ ಹೊಗೆಯ ವಾಸನೆ ಬರತೊಡಗಿದೆ. ಅದನ್ನು ಗಮನಿಸಿದ ಕಟ್ಟಡದ ಎದುರಿಗೆ ಮಣ್ಣಿನ ಪಾತ್ರೆಗಳನ್ನು ಮಾರುತ್ತಿದ್ದ ವ್ಯಾಪಾರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆ ವಿದ್ಯುತ್ ತಗುಲಿ ಹೊರಗೆ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಂಚಾರ ಠಾಣೆಯ ಪೊಲೀಸರು ಆಟೊದಲ್ಲಿ ಜಯದೇವ ಆಸ್ಪ‍ತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT