ಸಮೀಪದ ಕುಂದನೂರು ಸಂಗಮದ ಸುತ್ತ ಮೀನುಗಳು ಸತ್ತಿರುವುದು ಕಂಡು ಬಂದಿದೆ. ಇಲ್ಲಿನ ನೀರು ವಾಡಿ ಪಟ್ಟಣ, ಕುಂದನೂರು, ಕಡಬೂರು, ಚಾಮನೂರು ಸೇರಿದಂತೆ ಹಲವು ಗ್ರಾಮಗಳಿಗೆ ಪೂರೈಕೆಯಾಗುತ್ತಿದೆ. ನದಿ ನೀರನ್ನು ಸಂಸ್ಕರಿಸಿ ಪಟ್ಟಣಕ್ಕೆ ಪೂರೈಕೆ ಮಾಡಲಾಗುತ್ತಿದೆ. ಆದರೂ ಸ್ಥಳೀಯರ ಆತಂಕ ದೂರವಾಗಿಲ್ಲ. ಕುಡಿಯುವ ನೀರು ದುರ್ವಾಸನೆ ಬೀರುತ್ತಿದ್ದು, ನೀರಿನಲ್ಲಿ ವಿಷದ ಅಂಶವೇನಾದರೂ ಇದೆಯೇ ಎಂದು ಜನ ಆತಂಕಗೊಂಡಿದ್ದಾರೆ.