ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಪಿಸ್ತೂಲ್: ಆರೋ‍ಪಿ ಬಂಧನ

Last Updated 13 ಡಿಸೆಂಬರ್ 2019, 9:04 IST
ಅಕ್ಷರ ಗಾತ್ರ

ಜೇವರ್ಗಿ: ನಾಡಪಿಸ್ತೂಲ್ ಇಟ್ಟುಕೊಂಡು ಕೋಳಕೂರ ಕ್ರಾಸ್ ಹತ್ತಿರದ ವರ್ತುಳ ರಸ್ತೆಯಲ್ಲಿ ತಿರುಗಾಡುತ್ತಿದ್ದ ಆರೋಪಿಯೊಬ್ಬನನ್ನು ಜೇವರ್ಗಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪಟ್ಟಣದ ಖಾಜಾ ಕಾಲೊನಿ ನಿವಾಸಿ, ಆಟೊ ಚಾಲಕ ರಾಕೇಶ ಕರಬಸಪ್ಪ ಗುಡೂರ (28) ಬಂಧಿತ. ಅವರ ಬಳಿ ₹ 15 ಸಾವಿರ ಮೌಲ್ಯದ ನಾಡಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಕೇಶನನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT