ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷದ ಬಾಲಕ ಮಠದ ಉತ್ತರಾಧಿಕಾರಿ

Last Updated 13 ಜುಲೈ 2021, 16:13 IST
ಅಕ್ಷರ ಗಾತ್ರ

ಕಾಳಗಿ (ಕಲಬುರ್ಗಿ ಜಿಲ್ಲೆ): ಇಲ್ಲಿಯ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಹೃದಯಾಘಾತದಿಂದ ಲಿಂಗೈಕ್ಯರಾದ ಪೀಠಾಧಿಪತಿ ಶಿವಬಸವ ಶಿವಾಚಾರ್ಯರ (45) ಉತ್ತರಾಧಿಕಾರಿಯಾಗಿ ಅವರ ಪೂರ್ವಾಶ್ರಮದ ಸಹೋದರ ಗುರುನಂಜಯ್ಯ ಹಿರೇಮಠ ಅವರ ಮಗ, ಐದು ವರ್ಷದ ಬಾಲಕ ನೀಲಕಂಠ ಅವರನ್ನು ನೇಮಿಸಲಾಯಿತು.

ಹಿರೇನಾಗಾಂವ ಮಠದ ಶ್ರೀಗಳು ಮಂಗಳವಾರ, ಶಿವಬಸವ ಶಿವಾಚಾರ್ಯರ ತಲೆಯ ಮೇಲಿದ್ದ ಹಸಿರು ಶಾಲು, ಕೈಯಲ್ಲಿದ್ದ ಬೆತ್ತವನ್ನು ಉತ್ತರಾಧಿಕಾರಿಗೆ ಹಸ್ತಾಂತರಿಸಿದರು.

‘ಪೀಠಾಧಿಪತಿ ನಿಧನದ ನಂತರ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ನೇಮಿಸಲಾಗಿದೆ’ ಎಂದು ಭಕ್ತರು ಹೇಳಿದರು. ಶಿವಬಸವ ಶಿವಾಚಾರ್ಯರ ಅಂತ್ಯಕ್ರಿಯೆಯು ಪಂಚಾಚಾರ್ಯರ ತತ್ವದಂತೆ ಮಠದ ಆವರಣದಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT