<p><strong>ಕಲಬುರಗಿ</strong>: ಖ್ಯಾತ ಉದ್ಯಮಿ, ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥರು ಹಾಗೂ ಬೆಂಗಳೂರಿನ ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಶಾಂತಲಿಂಗಪ್ಪ ಎಸ್. ಪಾಟೀಲ ಕಡಗಂಚಿ (84) ಅವರು ಮಂಗಳವಾರ ರಾತ್ರಿ ಇಲ್ಲಿನ ಗಂಜ್ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ.</p>.<p>ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದವರಾದ ಪಾಟೀಲ ಅವರು ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ (ಎಚ್ ಕೆಸಿಸಿಐ) ನ ಸಂಸ್ಥಾಪಕ ಅಧ್ಯಕ್ಷರಾಗಿ ಸುದೀರ್ಘ 25 ವರ್ಷ ಸೇವೆ ಸಲ್ಲಿಸಿದ್ದರು.</p>.<p>ಸ್ಟೀಲ್ ಮತ್ತು ರೈಲು ಹಳಿಗೆ ಬಳಸಲಾಗುವ ಕಾಂಕ್ರೀಟ್ ಕಂಬಗಳ ಉತ್ಪಾದನಾ ಘಟಕ ಸೇರಿದಂತೆ ಹಲವು ಉದ್ಯಮಗಳ ಒಡೆತನ ಹೊಂದಿದ್ದರು.</p>.<p>ಕಲಬುರಗಿ ಹಾಗೂ ಹೈದರಾಬಾದ್ ಸೇರಿದಂತೆ ಹಲವು ಕಡೆ ಅವರ ಉದ್ಯಮಗಳಿವೆ.</p>.<p>ಅಂತ್ಯಕ್ರಿಯೆ ಬುಧವಾರ ಸಂಜೆ 4ಕ್ಕೆ ಹುಮನಾಬಾದ್ ರಸ್ತೆಯ ಕೆಎಂಎಫ್ ಡೇರಿ ಎದುರಿನ ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಆವರಣದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಖ್ಯಾತ ಉದ್ಯಮಿ, ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥರು ಹಾಗೂ ಬೆಂಗಳೂರಿನ ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಶಾಂತಲಿಂಗಪ್ಪ ಎಸ್. ಪಾಟೀಲ ಕಡಗಂಚಿ (84) ಅವರು ಮಂಗಳವಾರ ರಾತ್ರಿ ಇಲ್ಲಿನ ಗಂಜ್ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ.</p>.<p>ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದವರಾದ ಪಾಟೀಲ ಅವರು ಹೈದರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ (ಎಚ್ ಕೆಸಿಸಿಐ) ನ ಸಂಸ್ಥಾಪಕ ಅಧ್ಯಕ್ಷರಾಗಿ ಸುದೀರ್ಘ 25 ವರ್ಷ ಸೇವೆ ಸಲ್ಲಿಸಿದ್ದರು.</p>.<p>ಸ್ಟೀಲ್ ಮತ್ತು ರೈಲು ಹಳಿಗೆ ಬಳಸಲಾಗುವ ಕಾಂಕ್ರೀಟ್ ಕಂಬಗಳ ಉತ್ಪಾದನಾ ಘಟಕ ಸೇರಿದಂತೆ ಹಲವು ಉದ್ಯಮಗಳ ಒಡೆತನ ಹೊಂದಿದ್ದರು.</p>.<p>ಕಲಬುರಗಿ ಹಾಗೂ ಹೈದರಾಬಾದ್ ಸೇರಿದಂತೆ ಹಲವು ಕಡೆ ಅವರ ಉದ್ಯಮಗಳಿವೆ.</p>.<p>ಅಂತ್ಯಕ್ರಿಯೆ ಬುಧವಾರ ಸಂಜೆ 4ಕ್ಕೆ ಹುಮನಾಬಾದ್ ರಸ್ತೆಯ ಕೆಎಂಎಫ್ ಡೇರಿ ಎದುರಿನ ಪಾಟೀಲ ಗ್ರೂಪ್ ಆಫ್ ಇಂಡಸ್ಟ್ರೀಸ್ ಆವರಣದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>