ಅಫಜಲಪುರ: ‘ನೆರೆ ಹಾವಳಿ ಪರಿಹಾರದ ಬಗ್ಗೆ ಮನವರಿಕೆ ಮಾಡಲು ಶೀಘ್ರ ಮುಖ್ಯಮಂತ್ರಿ ಬಳಿ ನಿಯೋಗ ಕರೆದುಕೊಂಡು ಹೋಗಲಾಗುವುದು’ ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ ತಿಳಿಸಿದರು.
ತಾಲ್ಲೂಕಿನ ಮಣೂರು ಉಡಚಾಣ ಘತ್ತರಗಿ ಗ್ರಾಮಗಳಲ್ಲಿ ನೆರೆ ವೀಕ್ಷಿಸಿ ಮಾತನಾಡಿದ ಅವರು, ‘ಸದ್ಯ ಅಪಾರ ಹಾನಿ ಸಂಭವಿಸಿದ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ್ಯಮಂತ್ರಿಗಳು ಗಮನ ಹರಿಸಿದ್ದಾರೆ. ಇಲ್ಲಿನ ರೈತರು, ಜನರ ಪರಿಸ್ಥಿತಿಯನ್ನೂ ಅವರಿಗೆ ಮನವರಿಕೆ ಮಾಡುತ್ತೇವೆ’ ಎಂದರು.