<p><strong>ಕಲಬುರಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 1.30 ಲಕ್ಷ ಕ್ಯುಸೆಕ್ ನೀರು ಹರಿಸುವ ಪ್ರಮಾಣವನ್ನು ಭಾನುವಾರ ಸಂಜೆಯಿಂದ 60 ಸಾವಿರ ಕ್ಯುಸೆಕ್ ಗೆ ಇಳಿಸಿದ್ದರಿಂದ ಕೆಲವೆಡೆ ಪ್ರವಾಹದ ಅಬ್ಬರ ತುಸು ತಗ್ಗಿದೆ.</p>.<p>ಆದರೆ, ಅಮರ್ಜಾ ನದಿಯ ಉಪನದಿಯಾದ ಬೋರಿಹಳ್ಳ ಸೇರಿದಂತೆ ಸಣ್ಣಪುಟ್ಟ ಹಳ್ಳಗಳು ಭರ್ತಿಯಾಗಿ ಹರಿಯುತ್ತಿರುವುದರಿಂದ ಅಫಜಲಪುರ ತಾಲ್ಲೂಕಿನ ಗೌರ್ (ಬಿ), ದಿಕ್ಸಂಗಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳ ಸಂಪರ್ಕ ಬಂದ್ ಆಗಿದೆ.</p>.<p>ದೇವಲಗಾಣಗಾಪುರ ಬಳಿಯ ತೆಲ್ಲೂರು-ಕೆರಕನಹಳ್ಳಿ ಗ್ರಾಮಗಳ ಮಧ್ಯದ ಸಂಪರ್ಕ ಸ್ಥಗಿತಗೊಂಡಿದೆ.</p>.<p>'ಪ್ರಜಾವಾಣಿ' ಭೇಟಿ ನೀಡಿದ ತೆಲ್ಲೂರು, ಆನೂರ, ಆತನೂರ ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದ ನೀರಿನಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.</p>.<p>ಅಫಜಲಪುರದ ಗಾಣಗಾಪುರದಿಂದ ಜೇವರ್ಗಿ ತಾಲ್ಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ಹರಿಯುತ್ತಿದ್ದ ಭೀಮಾ ನದಿ ಪ್ರವಾಹ ಇಳಿದು ಸಂಪರ್ಕ ಪುನರಾರಂಭಗೊಂಡಿದೆ. ಆದರೆ, ಅಬ್ಬರ ಇನ್ನೂ ಕಡಿಮೆಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 1.30 ಲಕ್ಷ ಕ್ಯುಸೆಕ್ ನೀರು ಹರಿಸುವ ಪ್ರಮಾಣವನ್ನು ಭಾನುವಾರ ಸಂಜೆಯಿಂದ 60 ಸಾವಿರ ಕ್ಯುಸೆಕ್ ಗೆ ಇಳಿಸಿದ್ದರಿಂದ ಕೆಲವೆಡೆ ಪ್ರವಾಹದ ಅಬ್ಬರ ತುಸು ತಗ್ಗಿದೆ.</p>.<p>ಆದರೆ, ಅಮರ್ಜಾ ನದಿಯ ಉಪನದಿಯಾದ ಬೋರಿಹಳ್ಳ ಸೇರಿದಂತೆ ಸಣ್ಣಪುಟ್ಟ ಹಳ್ಳಗಳು ಭರ್ತಿಯಾಗಿ ಹರಿಯುತ್ತಿರುವುದರಿಂದ ಅಫಜಲಪುರ ತಾಲ್ಲೂಕಿನ ಗೌರ್ (ಬಿ), ದಿಕ್ಸಂಗಿ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳ ಸಂಪರ್ಕ ಬಂದ್ ಆಗಿದೆ.</p>.<p>ದೇವಲಗಾಣಗಾಪುರ ಬಳಿಯ ತೆಲ್ಲೂರು-ಕೆರಕನಹಳ್ಳಿ ಗ್ರಾಮಗಳ ಮಧ್ಯದ ಸಂಪರ್ಕ ಸ್ಥಗಿತಗೊಂಡಿದೆ.</p>.<p>'ಪ್ರಜಾವಾಣಿ' ಭೇಟಿ ನೀಡಿದ ತೆಲ್ಲೂರು, ಆನೂರ, ಆತನೂರ ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದ ನೀರಿನಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.</p>.<p>ಅಫಜಲಪುರದ ಗಾಣಗಾಪುರದಿಂದ ಜೇವರ್ಗಿ ತಾಲ್ಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ಹರಿಯುತ್ತಿದ್ದ ಭೀಮಾ ನದಿ ಪ್ರವಾಹ ಇಳಿದು ಸಂಪರ್ಕ ಪುನರಾರಂಭಗೊಂಡಿದೆ. ಆದರೆ, ಅಬ್ಬರ ಇನ್ನೂ ಕಡಿಮೆಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>