<p><strong>ಕಲಬುರಗಿ:</strong> ಭೀಮಾನದಿಯ ಪ್ರವಾಹದಿಂದ ಸಂಕಟ ಎದುರಿಸುತ್ತಿರುವ ತಾಲ್ಲೂಕಿನ ಫರತಾಬಾದ್, ಸರಡಗಿ ಗ್ರಾಮಕ್ಕೆ ಭಾನುವಾರ ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸಿಮ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ತಹಶೀಲ್ದಾರ್ ಕೆ.ಆನಂದಶೀಲ ಅವರಿಂದ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಮಾಹಿತಿ ಪಡೆದ ಅವರು, ಯಾವುದೇ ಮಾನವ ಹಾನಿಯಾಗದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು, ಜನರನ್ನು ಸಂರಕ್ಷಿಸಬೇಕು ಎಂದು ಸೂಚಿಸಿದರು.</p>.<p>ಕೂಡಿ ದರ್ಗಾದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿದ ಅವರು, ಸಂತ್ರಸ್ತರಿಗೆ ಗುಣಮಟ್ಟದ ಊಟ ಉಪಚಾರದ ವ್ಯವಸ್ಥೆ ಮಾಡಬೇಕು. ಆರೋಗ್ಯ ತಪಾಸಣೆ ಮಾಡಬೇಕು. ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಎಲ್ಲಾ ರೀತಿಯ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ:</p>.<p>ಚಿತ್ತಾಪುರ ತಾಲ್ಲೂಕಿನ ಚಾಮನೂರ ಮತ್ತು ಕಡಬೂರ ಗ್ರಾಮಗಳ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ಸಿಂಗ್ ಮೀನಾ ಅವರು ಭಾನುವಾರ ಭೇಟಿ ನೀಡಿ ಎನ್ಡಿಆರ್ಎಫ್ ತಂಡದ ಜೊತೆಯಲ್ಲಿ ಬೋಟ್ನಲ್ಲಿ ತೆರಳಿ ವೀಕ್ಷಣೆ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಕುಂದನೂರ ಗ್ರಾಮದ ಕಾಳಜಿ ಕೇಂದ್ರ ಹಾಗೂ ವಾಡಿ ಪಟ್ಟಣದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಉಪಹಾರ ಸೇವಿಸಿದರು. ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಪ್ರವಾಹ ಪೀಡಿತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸೌಕರ್ಯ ಕಲ್ಪಿಸಲು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಭೀಮಾನದಿಯ ಪ್ರವಾಹದಿಂದ ಸಂಕಟ ಎದುರಿಸುತ್ತಿರುವ ತಾಲ್ಲೂಕಿನ ಫರತಾಬಾದ್, ಸರಡಗಿ ಗ್ರಾಮಕ್ಕೆ ಭಾನುವಾರ ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸಿಮ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ತಹಶೀಲ್ದಾರ್ ಕೆ.ಆನಂದಶೀಲ ಅವರಿಂದ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಮಾಹಿತಿ ಪಡೆದ ಅವರು, ಯಾವುದೇ ಮಾನವ ಹಾನಿಯಾಗದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು, ಜನರನ್ನು ಸಂರಕ್ಷಿಸಬೇಕು ಎಂದು ಸೂಚಿಸಿದರು.</p>.<p>ಕೂಡಿ ದರ್ಗಾದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿದ ಅವರು, ಸಂತ್ರಸ್ತರಿಗೆ ಗುಣಮಟ್ಟದ ಊಟ ಉಪಚಾರದ ವ್ಯವಸ್ಥೆ ಮಾಡಬೇಕು. ಆರೋಗ್ಯ ತಪಾಸಣೆ ಮಾಡಬೇಕು. ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಎಲ್ಲಾ ರೀತಿಯ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ:</p>.<p>ಚಿತ್ತಾಪುರ ತಾಲ್ಲೂಕಿನ ಚಾಮನೂರ ಮತ್ತು ಕಡಬೂರ ಗ್ರಾಮಗಳ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ಸಿಂಗ್ ಮೀನಾ ಅವರು ಭಾನುವಾರ ಭೇಟಿ ನೀಡಿ ಎನ್ಡಿಆರ್ಎಫ್ ತಂಡದ ಜೊತೆಯಲ್ಲಿ ಬೋಟ್ನಲ್ಲಿ ತೆರಳಿ ವೀಕ್ಷಣೆ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಕುಂದನೂರ ಗ್ರಾಮದ ಕಾಳಜಿ ಕೇಂದ್ರ ಹಾಗೂ ವಾಡಿ ಪಟ್ಟಣದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಉಪಹಾರ ಸೇವಿಸಿದರು. ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಪ್ರವಾಹ ಪೀಡಿತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸೌಕರ್ಯ ಕಲ್ಪಿಸಲು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>