ಕಲಬುರ್ಗಿ: ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕ್ರಮಕೈಗೊಂಡಿದ್ದು, ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಡರಾತ್ರಿ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ವೀಕ್ಷಿಸಿದರು.
ಎಂಜಿನಿಯರ್ಗಳಿಂದ ಬ್ಯಾರೇಜ್ನಲ್ಲಿರುವ ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಮತ್ತು ಹೊರಹರಿವಿನ ಬಗ್ಗೆ ಮಾಹಿತಿ ಪಡೆದರು.
ಅಫಜಲಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾಳಜಿ ಕೇಂದ್ರ ಹಾಗೂ ಮತ್ತಿತರೆ ತರಳಿ ನೆರೆ ಸಮಸ್ಯೆಗಳ ಕುರಿತು ಪರಿಶೀಲಿಸಿದರು.