ರಕ್ಷಣೆಗೆ ಧಾವಿಸಿದ ಅಧಿಕಾರಿಗಳ ತಂಡ: ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಎಲ್ಲಾ ಅಧಿಕಾರಿಗಳು ಗಣಾಪುರ ಹತ್ತಿರದ ಸೇತುವೆಯ ಬಳಿ ಜಮಾಯಿಸಿದ್ದು ರಕ್ಷಣೆಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರುಣಕುಮಾರ ಕುಲಕರ್ಣಿ ತಿಳಿಸಿದರು.