‘ಉಭಯ ಅಕಾಡೆಮಿಗಳ ತರಬೇತಿ ಶಾಲೆ ಆರಂಭ ಆಗುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಹಲವು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡು ಪೈಲೆಟ್ ಆಗಬಹುದು. ಈ ನಿಲ್ದಾಣದಿಂದ 100ಕ್ಕೂ ಅಧಿಕ ವಿದ್ಯಾರ್ಥಿಗಳು ತರಬೇತಿ ಪಡೆದುಕೊಳ್ಳಬಹುದು. ಇದು ಈ ಭಾಗದ ಸಾಮಾಜಿಕ ಮತ್ತು ಆರ್ಥಿಕ ಬೆಳೆವಣಿಗೆಗೆ ಸಹಾಯಕವಾಗಲಿದೆ’ ಎಂದು ಹೇಳಿದ್ದಾರೆ.